ಗದಗ: ಜಗಿಯುವ ತಂಬಾಕು ಉತ್ಪನ್ನ ಮತ್ತು ಪಾನ್ ಮಸಾಲ, ಇತ್ಯಾದಿಗಳನ್ನು ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊವಿಡ್-19 ವೈರಾಣು ಹರಡುವಿಕೆ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿರುತ್ತಾರೆ. ಆದೇಶ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯಿದೆ 2005, ಭಾರತೀಯ ದಂಡ ಸಂಹಿತೆಯ ಕಲಂ 188, 268 ಮತ್ತು 270ರ ಅಡಿಯಲ್ಲಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಗದಗ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್

ಉತ್ತರಪ್ರಭಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ…

ಗದಗನಲ್ಲಿ ಬೈಕ್ ಕದ್ದ ಆರೋಪಿ ಬಂಧನ

ಗದಗ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಗದಗ ಶಹರ ಪೊಲೀಸರು ಶನಿವಾರ ಬಂಧಿಸಿದ್ದಾರೆ

ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿರುವ ಮಹಾಮಾರಿ!

ನವದೆಹಲಿ: ದೇಶದಲ್ಲಿ ಶರವೇಗದಲ್ಲಿ ಹಬ್ಬುತ್ತಿರುವ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಆತಂಕ ಮೂಡಿಸುತ್ತಿದೆ.…

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…