ಗದಗ: ಜಗಿಯುವ ತಂಬಾಕು ಉತ್ಪನ್ನ ಮತ್ತು ಪಾನ್ ಮಸಾಲ, ಇತ್ಯಾದಿಗಳನ್ನು ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊವಿಡ್-19 ವೈರಾಣು ಹರಡುವಿಕೆ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿರುತ್ತಾರೆ. ಆದೇಶ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯಿದೆ 2005, ಭಾರತೀಯ ದಂಡ ಸಂಹಿತೆಯ ಕಲಂ 188, 268 ಮತ್ತು 270ರ ಅಡಿಯಲ್ಲಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ರೈತರ ಕಷ್ಟ ಕಣ್ತೆರೆದು ನೋಡ್ರಿ ಎಮ್.ಎಲ್.ಎ ಹೇಳಿದಂಗ ಕೇಳಬ್ಯಾಡ್ರಿ: ರೈತರಿಂದ ಲಕ್ಷ್ಮೇಶ್ವರ ತಹಶೀಲ್ದಾರ್ ತರಾಟೆಗೆ

ರಾಜ್ಯದಲ್ಲಿ ಸರ್ಕಾರ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಮಾರಕವಾದ ಕಾಯ್ದೆ ಜಾರಿಗೆ ತಂದಿದೆ. ಜೊತೆಗೆ ಸ್ಥಳೀಯವಾಗಿಯೂ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ನೀವು ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರು ಹೇಳಿದಂತೆ ಮಾತ್ರ ಕೇಳಬೇಡಿ ರೈತರ ಸಂಕಷ್ಟಗಳನ್ನು ಕಣ್ತೆರೆದು ನೋಡಿ ಎಂದು ತಹಶೀಲ್ದಾರರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…

ಕಂಟೆನ್ಮೆಂಟ್ ಜೋನ್ ಹಾಗೂ ಬಫರ್ ವಲಯಗಳ ಬಗ್ಗೆ ಪರಿಷ್ಕೃತ ಮಾರ್ಗಸೂಚಿ

ರಾಜ್ಯದಲ್ಲಿ ಕೋವಿಡ್-19 ವಿಕಸಿಸುತ್ತಿರುವ ಸಂದರ್ಭದಲ್ಲಿ, ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ಅಕ್ಕ-ಪಕ್ಕದಲ್ಲಿರುವ/ಹತ್ತಿರದಲ್ಲಿಯೇ ಇರುವ ಮನೆಗಳು ಅಥವಾ ಅಪಾರ್ಟ್ಮೆಂಟ್/ ವಸತಿ ಸಮುಚ್ಛಯಗಳಲ್ಲಿ ವರದಿಯಾಗುತ್ತಿವೆ. ಇದರಿಂದ ಕಂಟೇನ್ಮೆಂಟ್ ವಲಯಗಳ ಸಂಖ್ಯೆಯು ಮಿತಿ ಮೀರಿದ್ದು, ಪ್ರಾಧಿಕಾರಿಗಳಿಗೆ ಸರ್ವೇಕ್ಷಣಾ ಚಟುವಟಿಕೆಗಳನ್ನು ಸುಲಭವಾಗಿ ಕೈಗೊಳ್ಳಲು ಅಡ್ಡಿಯಾಗುವುದೇ ಅಲ್ಲದೇ, ಪರಿಧಿ ವಲಯ ನಿಯಂತ್ರಣವನ್ನೂ ಸಹ ಖಚಿತಪಡಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.