ಗದಗ: ಜಗಿಯುವ ತಂಬಾಕು ಉತ್ಪನ್ನ ಮತ್ತು ಪಾನ್ ಮಸಾಲ, ಇತ್ಯಾದಿಗಳನ್ನು ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊವಿಡ್-19 ವೈರಾಣು ಹರಡುವಿಕೆ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿರುತ್ತಾರೆ. ಆದೇಶ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯಿದೆ 2005, ಭಾರತೀಯ ದಂಡ ಸಂಹಿತೆಯ ಕಲಂ 188, 268 ಮತ್ತು 270ರ ಅಡಿಯಲ್ಲಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ.

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ರಾಜ್ಯದಲ್ಲಿಂದು 4169 ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4169 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…