ವಾಷಿಂಗ್‌ಟನ್‌: ಶ್ವೇತ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿಂದು ಚೀನಾ ವಿರುದ್ಧ ಅಮೇರಿಕಾ ಅಧ್ಯಕ್ಷ ಡೀನಾಲ್ಡ್ ಟ್ರಂಪ್ ಹರಿಹಾಯ್ದರು. ಕೊರೋನಾ ವೈರಸ್ ಇಷ್ಟೊಂದು ವ್ಯಾಪಕವಾಗಿ ಹರಡುವ ಮುನ್ನವೇ ಅದನ್ನು ನಿಯಂತ್ರಿಸಬಹುದಿತ್ತು. ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಸಮಾಧಾನ ಹೊರಹಾಕಿದರು.

ವಿಶ್ವದ ದೊಡ್ಡಣ್ಣ ಖ್ಯಾತಿ ಪಡೆದ ಅಮೇರಿಕಾದಲ್ಲೂ ಸಹ ಕೊರೋನಾ ತನ್ನ ಅಟ್ಟಹಾಸ ಮೆರೆದಿದೆ. ಅಮೆರಿಕದಲ್ಲಿ ಇದುವರೆಗೂ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 55000 ಸಂಖ್ಯೆ ತಲುಪಿದೆ. ಇದರಿಂದಾಗಿ ಜಗತ್ತಿನಲ್ಲಿಯೇ ಕೊರೊನಾದಿಂದ ಅಮೇರಿಕಾ ಹೆಚ್ಚು ಸಮಸ್ಯೆ ಎದುರಿಸುವಂತಾಗಿದೆ. ಇದರ ಪರಿಣಾಮ ಆರ್ಥಿಕತೆಯ ಮೇಲೂ ಬಿದ್ದಿದೆ. ಇದರಿಂದಾಗಿ ಈ ನಿರ್ಧಾರ ಪ್ರಕಟಿಸಿದ ಟ್ರಂಪ್ ಅಮೇರಿಕಾದಲ್ಲಾದ ಹಾನಿಯನ್ನು ಅಂತಿಮಗೊಳಿಸಿಲ್ಲ. ಆದರೆ ಜರ್ಮನ್ ಗಿಂತ ಹೆಚ್ಚಿನ ಹಾನಿಯಾಗಿದ್ದು, ಅದಕ್ಕಿಂತ ಹೆಚ್ಚಿನ ಪರಿಹಾರ ಕೇಳಲಿದ್ದೇವೆ ಎಂದರು.

ಇತ್ತಿಚೆಗಷ್ಟೆ ಕೊರೋನಾ ಸೋಂಕಿನಿಂದ ಜರ್ನನ್ ದೇಶಕ್ಕೆ ಆಗಿರುವ ಹಾನಿಗಾಗಿ 165 ಬಿಲಿಯನ್ ಡಾಲರ್ ಪರಿಹಾರ ನೀಡುವಂತೆ ಜರ್ಮನ್ ದೇಶ, ಚೀನಾವನ್ನು ಆಗ್ರಹಿಸಿತ್ತು. ಇದರ ಬೆನ್ನಲ್ಲೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಕೂಡ ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ತುಂಬಿಕೊಡಬೇಕು ಎಂದು ನೀಡಿದ ಹೇಳಿಕೆ ಮಹತ್ವ ಬಂದಿದೆ.

Leave a Reply

Your email address will not be published. Required fields are marked *

You May Also Like

ನಂಬಿದ್ರ ನಂಬ್ರಿ-ಬಿಟ್ರಬಿಡ್ರಿ: 66 ವರ್ಷದ ಹೆಣ್ಮಗಳಿಗೆ 18 ತಿಂಗಳದಾಗ 8 ಮಕ್ಕಳು ಹುಟ್ಟ್ಯಾವು!

ಸತ್ತವ್ರು ಬದಕಿದ್ದು, ಬದುಕಿದವರು ಸತ್ತಿದ್ದು ಇಂಥ ಅದೆಷ್ಟ್ ಘಟನಾ ನಾವು ಕೇಳಿವಿ, ನೋಡಿವಿ. ಆದ್ರ ಎಂತೆಂಥ ಚಿತ್ರ-ವಿಚಿತ್ರ ಘಟನೆನಾ ನಾವು ಕೇಳಿವಿ, ನೋಡಿವಿ. ಆದ್ರ ಈ ಘಟನಾ ಮಾತ್ರ ನಾವು ಎಂದು ಕಾಣದ್ದು, ಕೇಳದ್ದು ಅಂದ್ರು ತಪ್ಪಾಗ್ಲಿಕ್ಕಿಲ್ಲ.

ಸೀಡಿ ಪ್ರಕರಣ : ಸಂತ್ರಸ್ತೆಗೆ ಗ್ರಾಮಸ್ಥರ ಬೆಂಬಲ

ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.

ಯಾವುದೇ ಆತಂಕ ಬೇಡ ಅಮಿತ್ ಶಾ ಆರೋಗ್ಯವಾಗಿದ್ದಾರಂತೆ

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.