ಕೊಡುಗು: ಕಾಫಿ ನಾಡು ಕೊಡುಗಿನಲ್ಲೀಗ ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್ ಡೌನ್ ಪರಿಣಾಮದಿಂದ ಕಾಫಿ ಉದ್ಯಮದ ವಹಿವಾಟು ಸ್ಥಗಿತವಾಗಿದ್ದು, ಸಾವಿರಾರು ಬೆಳೆಗಾರರು ಹಾಗೂ ಕಾಫಿ ಉದ್ಯಮವನ್ನೆ ನಂಬಿಕೊಂಡ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇಲ್ಲಿನ ಕುಶಾಲನಗರದ ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ 35ಕ್ಕೂ ಹೆಚ್ಚು ಕಾಫಿ ಉದ್ಯಮಕ್ಕೆ ಸಂಬಮಧಿಸಿದ ಕೈಗಾರಿಕೆಗಳಿವೆ. ರಾಜ್ಯದಲ್ಲಿ ಹೆಚ್ಚು ಕಾಫಿ ಉತ್ಪಾದನೆ ಆಗುವುದೇ ಕೊಡುಗಿನಲ್ಲಿ. ಆದರೆ ಇದಿಗ ಲಾಕ್ ಡೌನ್ ಹಿನ್ನೆಲೆ ಸಾಗಣೆ ಮತ್ತು ರಫ್ತು ಅಸಾಧ್ಯವಾಗಿದೆ. ಸರ್ಕಾರ ಈಗಾಗಲೇ ಸಗಟು ಸಾಗಣೆಗೆ ವಿನಾಯಿತಿ ನೀಡಿದರೂ ಕೂಡ ಈ ಕಾಫಿ ಉದ್ಯಮಕ್ಕೆ ಅದರದ್ದೆ ಆದ ಕೆಲವು ಮಿತಿಗಳಿರುವುದರಿಂದಾಗಿ ರಫ್ತು ಸಾಧ್ಯವಾಗುತ್ತಿಲ್ಲ.

ಕಾಫಿಗೆ ಸಂಬಂಧಿಸಿದ ಉದ್ಯಮಗಳಿಂದಲೇ ಜಿಲ್ಲೆಯಲ್ಲಿ ವಾರ್ಷಿಕ 4 ಸಾವಿರ ಕೋಟಿ ವಹಿವಾಟು ನಡೆಯುತ್ತದೆ. ಆದರೆ ಬಹುತೇಕ ಕೈಗಾರಿಕೆಗಳು ಬಂದ್ ಆಗಿರುವುದರಿಂದ ಟಷ್ಟು ಹಾನಿಯಾಗಲಿದೆ ಎನ್ನುವ ಲೆಕ್ಕಾಚಾರವೇ ಊಹೆ ನಿಲುಕದ್ದಾಗಿದೆ. ಒಂದೆಡೆ ಕೈಗಾರಿಕೆ ಬಂದ್ ಆಗಿರುವದರಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾದರೆ ಮತ್ತೊಂದೆಡೆ ಕೊಡಗು ಜಿಲ್ಲೆಯ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳಿಂದ ಕೆಲಸಕ್ಕೆ ಬರುತ್ತಿದ್ದ ಕಾರ್ಮಿಕರಿಗೆ ಕೆಲಸಕ್ಕೆ ಬರುವುದು ಅಸಾಧ್ಯವಾಗಿದೆ.

2500 ಕಾರ್ಮಿಕರು

ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪ ಕೂಡ್ಲೂರಿನಲ್ಲಿ ಕೈಗಾರಿಕೆಯಲ್ಲಿ ಕಾಫಿ ಉದ್ಯಮವನ್ನೆ ನಂಬಿಕೊಂಡು 2500 ಕಾರ್ಮಿಕರಿದ್ದಾರೆ. ಆದರೆ ಇದೀಗ ಉದ್ಯಮ ಸ್ಥಗಿತವಾಗಿರುವುದರಿಂದ ಕಾರ್ಮಿಕ ಕುಟುಂಬಳ ಸ್ಥಿತಿ ಹೇಳತೀರದಾಗಿದೆ. ಇದರ ಜೊತೆಗೆ ಕಾಫಿ ಉದ್ಯಮಕ್ಕೂ ಕೂಡ ಅಪಾರಪ್ರಮಾಣದ ಹಾನಿಯಾಗಿದೆ. ಇಂತಹ ಅದೆಷ್ಟೋ ಉದ್ಯಮಗಳಿಗೆ ಭಾರಿ ಪೆಟ್ಟು ಬಿದ್ದಿದೆ. ಇದರಿಂದಾಗಿ ಆರ್ಥಿಕ ಸ್ಥಿತಿ ಕುಸಿತ ಕಾಣುತ್ತಲೇ ಸಾಗಿದೆ. ದುಡಿಯವ ವರ್ಗದ ಪರಿಸ್ಥಿತಿಯಂತೂ ಹೇಳತೀರದಂತಾಗಿದೆ.

1 comment
  1. ಕೊರೋನಾ ಎಲ್ಲವನ್ನೂ ಕಟ್ಟಿ ಹಾಕುತ್ತಿದೆ…. ಸರ್ಕಾರ ಈ ಕುರಿತು ಶೀಘ್ರವಾಗಿ ಕೆಲವು Rapid Action ಗಳನ್ನು ಕಂಡುಕೊಳ್ಳಬೇಕಿದೆ.

Leave a Reply

Your email address will not be published. Required fields are marked *

You May Also Like

ನಿಯಮ ಮೀರದರೆ ಪೊಲೀಸ್ ಬಲ ಪ್ರಯೋಗ ಕೊನೆಯ ಅಸ್ತ್ರ

ಈಗಾಗಲೇ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಬೇಕು. ಈಗಾಗಲೇ ಜಿಲ್ಲೆಯಲ್ಲಿಯೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಹೀಗೆ ಮುಂದುವರೆದರೆ ಪೊಲೀಸ್ ಬಲ ಪ್ರಯೋಗ ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ದೇಶದ ಪ್ರಗತಿಗೆ ವಿಪಕ್ಷಗಳು ಅಡ್ಡಗಾಲು ಹಾಕುತ್ತಿವೆ – ಮೋದಿ!

ಭಗಲ್ ಪುರ : ರಾಷ್ಟ್ರದ ಹಿತಾಸಕ್ತಿ ಮನದಲ್ಲಿಟ್ಟು ಎನ್ ಡಿಎ ಕೆಲಸ ಮಾಡುತ್ತಿದ್ದರೆ ವಿಪಕ್ಷಗಳು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.