ಕೊಡುಗು: ಕಾಫಿ ನಾಡು ಕೊಡುಗಿನಲ್ಲೀಗ ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್ ಡೌನ್ ಪರಿಣಾಮದಿಂದ ಕಾಫಿ ಉದ್ಯಮದ ವಹಿವಾಟು ಸ್ಥಗಿತವಾಗಿದ್ದು, ಸಾವಿರಾರು ಬೆಳೆಗಾರರು ಹಾಗೂ ಕಾಫಿ ಉದ್ಯಮವನ್ನೆ ನಂಬಿಕೊಂಡ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇಲ್ಲಿನ ಕುಶಾಲನಗರದ ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ 35ಕ್ಕೂ ಹೆಚ್ಚು ಕಾಫಿ ಉದ್ಯಮಕ್ಕೆ ಸಂಬಮಧಿಸಿದ ಕೈಗಾರಿಕೆಗಳಿವೆ. ರಾಜ್ಯದಲ್ಲಿ ಹೆಚ್ಚು ಕಾಫಿ ಉತ್ಪಾದನೆ ಆಗುವುದೇ ಕೊಡುಗಿನಲ್ಲಿ. ಆದರೆ ಇದಿಗ ಲಾಕ್ ಡೌನ್ ಹಿನ್ನೆಲೆ ಸಾಗಣೆ ಮತ್ತು ರಫ್ತು ಅಸಾಧ್ಯವಾಗಿದೆ. ಸರ್ಕಾರ ಈಗಾಗಲೇ ಸಗಟು ಸಾಗಣೆಗೆ ವಿನಾಯಿತಿ ನೀಡಿದರೂ ಕೂಡ ಈ ಕಾಫಿ ಉದ್ಯಮಕ್ಕೆ ಅದರದ್ದೆ ಆದ ಕೆಲವು ಮಿತಿಗಳಿರುವುದರಿಂದಾಗಿ ರಫ್ತು ಸಾಧ್ಯವಾಗುತ್ತಿಲ್ಲ.

ಕಾಫಿಗೆ ಸಂಬಂಧಿಸಿದ ಉದ್ಯಮಗಳಿಂದಲೇ ಜಿಲ್ಲೆಯಲ್ಲಿ ವಾರ್ಷಿಕ 4 ಸಾವಿರ ಕೋಟಿ ವಹಿವಾಟು ನಡೆಯುತ್ತದೆ. ಆದರೆ ಬಹುತೇಕ ಕೈಗಾರಿಕೆಗಳು ಬಂದ್ ಆಗಿರುವುದರಿಂದ ಟಷ್ಟು ಹಾನಿಯಾಗಲಿದೆ ಎನ್ನುವ ಲೆಕ್ಕಾಚಾರವೇ ಊಹೆ ನಿಲುಕದ್ದಾಗಿದೆ. ಒಂದೆಡೆ ಕೈಗಾರಿಕೆ ಬಂದ್ ಆಗಿರುವದರಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾದರೆ ಮತ್ತೊಂದೆಡೆ ಕೊಡಗು ಜಿಲ್ಲೆಯ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳಿಂದ ಕೆಲಸಕ್ಕೆ ಬರುತ್ತಿದ್ದ ಕಾರ್ಮಿಕರಿಗೆ ಕೆಲಸಕ್ಕೆ ಬರುವುದು ಅಸಾಧ್ಯವಾಗಿದೆ.

2500 ಕಾರ್ಮಿಕರು

ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪ ಕೂಡ್ಲೂರಿನಲ್ಲಿ ಕೈಗಾರಿಕೆಯಲ್ಲಿ ಕಾಫಿ ಉದ್ಯಮವನ್ನೆ ನಂಬಿಕೊಂಡು 2500 ಕಾರ್ಮಿಕರಿದ್ದಾರೆ. ಆದರೆ ಇದೀಗ ಉದ್ಯಮ ಸ್ಥಗಿತವಾಗಿರುವುದರಿಂದ ಕಾರ್ಮಿಕ ಕುಟುಂಬಳ ಸ್ಥಿತಿ ಹೇಳತೀರದಾಗಿದೆ. ಇದರ ಜೊತೆಗೆ ಕಾಫಿ ಉದ್ಯಮಕ್ಕೂ ಕೂಡ ಅಪಾರಪ್ರಮಾಣದ ಹಾನಿಯಾಗಿದೆ. ಇಂತಹ ಅದೆಷ್ಟೋ ಉದ್ಯಮಗಳಿಗೆ ಭಾರಿ ಪೆಟ್ಟು ಬಿದ್ದಿದೆ. ಇದರಿಂದಾಗಿ ಆರ್ಥಿಕ ಸ್ಥಿತಿ ಕುಸಿತ ಕಾಣುತ್ತಲೇ ಸಾಗಿದೆ. ದುಡಿಯವ ವರ್ಗದ ಪರಿಸ್ಥಿತಿಯಂತೂ ಹೇಳತೀರದಂತಾಗಿದೆ.

1 comment
  1. ಕೊರೋನಾ ಎಲ್ಲವನ್ನೂ ಕಟ್ಟಿ ಹಾಕುತ್ತಿದೆ…. ಸರ್ಕಾರ ಈ ಕುರಿತು ಶೀಘ್ರವಾಗಿ ಕೆಲವು Rapid Action ಗಳನ್ನು ಕಂಡುಕೊಳ್ಳಬೇಕಿದೆ.

Leave a Reply

Your email address will not be published. Required fields are marked *

You May Also Like

ಸಂಗೀತ ಲೋಕದ ಧ್ರವತಾರೆ ಇನ್ನೂ ಮುಂದೆ ನೆನಪು ಮಾತ್ರ!

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಇನ್ನು ಸಂಗೀತ ಲೋಕದ ನೆನಪು ಮಾತ್ರ!

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಯೋಗ್ಯ ಅಭ್ಯರ್ಥಿ ಕುಬೇರಪ್ಪ: ಎಚ್.ಕೆ.ಪಾಟೀಲ್

ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಡಾ. ಆರ್.ಎಂ ಕುಬೇರಪ್ಪ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರು ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸಲು ಯೋಗ್ಯ ಅಭ್ಯರ್ಥಿಯಾಗಿದ್ದಾರೆ ಎಂದು ಶಾಸಕ ಹಾಗೂ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ.ಪಾಟೀಲ್ ಹೇಳಿದರು.

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಗದಗ ಜಿಲ್ಲೆಯಲ್ಲಿಂದು 9 ಪಾಸಿಟಿವ್ ಎಲ್ಲೆಲ್ಲಿ..?

ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ…