ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಈವರೆಗೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಆದರೆ ಈ ಸೋಂಕಿನಿಂದ ರಕ್ಷಣೆ ಪಡೆಯಲು ಪ್ಲಾಸ್ಮಾ ಥೆರಪಿ ಉತ್ತಮ ವಿಧಾನ ಎನ್ನಲಾಗಿದೆ. ಈ ಕಾರಣದಿಂದಾಗಿ ರಾಜ್ಯದ ಇಬ್ಬರು ಪ್ಲಾಸ್ಮಾ ದಾನ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಪ್ಲಾಸ್ಮಾ ಥೆರಫಿ ಚಿಕಿತ್ಸೆಗಾಗಿ ಕೇಂದ್ರದ ಅನುಮತಿಯನ್ನು ಪಡೆದುಕೊಂಡಿದೆ. ಆದರೆ ಈ ಚಿಕಿತ್ಸೆಗೆ ದಾನಿಗಳ ಕೊರತೆ ಎದುರಾಗಿತ್ತು. ಇದೀಗ ರಾಜ್ಯದ ಇಬ್ಬರು ದಾನಿಗಳು ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದು ಇತರರಿಗೂ ಪ್ರೇರಣೆಯಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರು ಪ್ಲಾಸ್ಮಾ ಥೆರಲಿಯನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಪ್ಲಾಸ್ಮಾ ಡೋನೆಟ್ ಗಾಗಿ ಜನರನ್ನು ಪ್ರೇರೆಪಿಸುವ ಮೂಲಕ ಡಾ.ವಿಶಾಲ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊರೋನಾ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಬೆಂಗಳೂರು ಮೂಲದ ಈ ವ್ಯಕ್ತಿ ಪ್ಲಾಸ್ಮಾ ದಾನಕ್ಕೆ ಮುಂದಾದ ಮೊದಲಿಗರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲಿ ಇದೀಗ ಗುಣಮುಖರಾದ ಇವರಿಗೆ ಅದರ ಗಂಭೀರತೆ ಅರ್ಥವಾಗಿರುತ್ತದೆ. ಹೀಗಾಗಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಚಿಕಿತ್ಸೆ ಪರ್ಯಾಯವಾದಾಗ ಪ್ಲಾಸ್ಮಾ ದಾನಿಗಳ ಕೊರತೆ ನೀಗಿಸಲು ಮುಂದಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರಿಂದ ಮಾಹಿತಿ ಪಡೆದ ಇಬ್ಬರು ದಾನಿಗಳು ಪ್ಲಾಸ್ಮಾ ದಾನ ಮಾಡಿದ್ದು, ಕೊರೋನಾಗೆ ಇನ್ನೂ ಯಾವುದೇ ಚಿಕಿತ್ಸೆಗಳೂ ಬಂದಿಲ್ಲ. ಚಿಂತಾಜನಕ ಸ್ಥಿತಿಯಲ್ಲಿರುವ ಜನರಿಗೆ ನನ್ನಿಂದ ಜೀವ ಉಳಿಯುತ್ತಿದೆ ಎನ್ನುವುದು ನನಗೆ ಒದಗಿದ ಅದೃಷ್ಟ. ಈಗಾಗಲೇ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಮಾ ದಾನ ಮಾಡಲು ಮುಂದಾಗಬೇಕು ಎಂದು ಇಬ್ಬರು ದಾನಿಗಳು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಬೆಳ್ಳಂಬೆಳ್ಳಗ್ಗೆ ಫೀಲ್ಡ್‌ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.

ಫೋನ್ ಗಾಗಿ ಈ ಬಾಲಕ ಮಾಡಿದ್ದೇನು?

ಬೆಂಗಳೂರು: ಸ್ಮಾರ್ಟ್ ಫೋನ್ ಗಾಗಿ ಕಳ್ಳತನ ಮಾಡಲು ಪ್ರಾರಂಭಿಸಿದ ಅಪ್ರಾಪ್ತ ಬಾಲಕನೊಬ್ಬ ಬರೋಬ್ಬರಿ ರೂ. 4…

ಕೆಎಸ್ಆರ್ ಟಿ ಸಿ ಬ್ರ್ಯಾಂಡ್ ಕರ್ನಾಟಕದ ಕೈ ತಪ್ಪಿಲ್ಲ : ಸಚಿವ ಸವದಿ ಸ್ಪಷ್ಟನೆ

ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ.