ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಈವರೆಗೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಆದರೆ ಈ ಸೋಂಕಿನಿಂದ ರಕ್ಷಣೆ ಪಡೆಯಲು ಪ್ಲಾಸ್ಮಾ ಥೆರಪಿ ಉತ್ತಮ ವಿಧಾನ ಎನ್ನಲಾಗಿದೆ. ಈ ಕಾರಣದಿಂದಾಗಿ ರಾಜ್ಯದ ಇಬ್ಬರು ಪ್ಲಾಸ್ಮಾ ದಾನ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಪ್ಲಾಸ್ಮಾ ಥೆರಫಿ ಚಿಕಿತ್ಸೆಗಾಗಿ ಕೇಂದ್ರದ ಅನುಮತಿಯನ್ನು ಪಡೆದುಕೊಂಡಿದೆ. ಆದರೆ ಈ ಚಿಕಿತ್ಸೆಗೆ ದಾನಿಗಳ ಕೊರತೆ ಎದುರಾಗಿತ್ತು. ಇದೀಗ ರಾಜ್ಯದ ಇಬ್ಬರು ದಾನಿಗಳು ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದು ಇತರರಿಗೂ ಪ್ರೇರಣೆಯಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರು ಪ್ಲಾಸ್ಮಾ ಥೆರಲಿಯನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಪ್ಲಾಸ್ಮಾ ಡೋನೆಟ್ ಗಾಗಿ ಜನರನ್ನು ಪ್ರೇರೆಪಿಸುವ ಮೂಲಕ ಡಾ.ವಿಶಾಲ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊರೋನಾ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಬೆಂಗಳೂರು ಮೂಲದ ಈ ವ್ಯಕ್ತಿ ಪ್ಲಾಸ್ಮಾ ದಾನಕ್ಕೆ ಮುಂದಾದ ಮೊದಲಿಗರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲಿ ಇದೀಗ ಗುಣಮುಖರಾದ ಇವರಿಗೆ ಅದರ ಗಂಭೀರತೆ ಅರ್ಥವಾಗಿರುತ್ತದೆ. ಹೀಗಾಗಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಚಿಕಿತ್ಸೆ ಪರ್ಯಾಯವಾದಾಗ ಪ್ಲಾಸ್ಮಾ ದಾನಿಗಳ ಕೊರತೆ ನೀಗಿಸಲು ಮುಂದಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರಿಂದ ಮಾಹಿತಿ ಪಡೆದ ಇಬ್ಬರು ದಾನಿಗಳು ಪ್ಲಾಸ್ಮಾ ದಾನ ಮಾಡಿದ್ದು, ಕೊರೋನಾಗೆ ಇನ್ನೂ ಯಾವುದೇ ಚಿಕಿತ್ಸೆಗಳೂ ಬಂದಿಲ್ಲ. ಚಿಂತಾಜನಕ ಸ್ಥಿತಿಯಲ್ಲಿರುವ ಜನರಿಗೆ ನನ್ನಿಂದ ಜೀವ ಉಳಿಯುತ್ತಿದೆ ಎನ್ನುವುದು ನನಗೆ ಒದಗಿದ ಅದೃಷ್ಟ. ಈಗಾಗಲೇ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಮಾ ದಾನ ಮಾಡಲು ಮುಂದಾಗಬೇಕು ಎಂದು ಇಬ್ಬರು ದಾನಿಗಳು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ

ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…