ಬೆಂಗಳೂರು: ಈಗಾಗಲೇ ಮೇ.3ರ ವರೆಗೆ ಲಾಕ್ ಡೌನ್ ಘೋಷಣೆಯಾಗಿದ್ದು ನಂತರ ರಾಜ್ಯದಲ್ಲಿ ಸ್ಥಿತಿಗತಿ ಹೇಗಿರಬಹುದು ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ರಾಜ್ಯ ಸರ್ಕಾರ ರೆಡ್, ಗ್ರೀನ್, ಯಲ್ಲೋ ಮೂರು ವಿಭಾಗಗಳನ್ನು ಮಾಡಿದ್ದು ಆಯಾ ವಿಭಾಗಕ್ಕೆ ತಕ್ಕಂತೆ ನಿಯಮಗಳನ್ನು ಸಡಿಲಿಸಲಿದೆ. ಯಾವ ಜಿಲ್ಲೆಗಳು ಯಾವ ವಿಭಾಗದಲ್ಲಿವೆ ಎನ್ನುವ ವಿವರ ಇಲ್ಲಿದೆ ನೋಡಿ

ಝೋನ್ ಗಳ ವಿವರ

ರೆಡ್‌: ವಿಜಯಪುರ, ಕಲಬುರಗಿ, ಬೆಂಗಳೂರು, ಮೈಸೂರು, ಬೆಳಗಾವಿ, ಬಾಗಲಕೋಟೆ,

ಗ್ರೀನ್: ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಚಾಮರಾಜನಾಗರ, ಕೋಲಾರ, ಯಾದಗಿರಿ, ರಾಯಚೂರು, ಉಡುಪಿ, ಕೊಪ್ಪಳ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ,

ಯೆಲ್ಲೋ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೀದರ್‌, ಗದಗ, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ತುಮಕೂರು,

ಆಯಾ ಜಿಲ್ಲೆಯ ಸ್ಥಿತಿಗತಿಯ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ. ಲಾಕ್ ಡೌನ್ ಅವಧಿ ಮುಗಿದ ನಂತರ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸುವ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಅಭಿಪ್ರಾಯ ತಿಳಿಸಿದ್ದಾರೆ ಎನ್ನುವುದು ಮೂಲಗಳ ಮಾಹಿತಿ.

ಈಗಾಗಲೇ ರಾಜ್ಯದಲ್ಲಿ ಮೂರು ಝೋನ್‌ಗಳನ್ನಾಗಿ ವಿಭಾಗಿಸಲಾಗಿದೆ. ರೆಡ್‌ ಝೋನ್‌ನಲ್ಲಿ 6 ಜಿಲ್ಲೆಗಳಲ್ಲಿವೆ. ರೆಡ್ ಝೋನ್ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಯಲಿದೆ. ಉಳಿದಂತೆ ಗ್ರೀನ್‌ ಮತ್ತು ಯೆಲ್ಲೋ ಝೋನ್‌ಗಳಲ್ಲಿ ಲಾಕ್‌ಡೌನ್‌ ಮೇ 3ರ ನಂತರ ಸಡಿಲಗೊಳ್ಳುವ ಸಾಧ್ಯತೆಯೇ ಹೆಚ್ಚು. ಈ ಬಗ್ಗೆ ಮೇ.3ರ ನಂತರವೆ ಆದೇಶ ಹೊರಬೀಳುವ ಸಾಧ್ಯತೆ ಇದೆ. ಇನ್ನು ಇದೆ ವೇಳೆ  ಗ್ರೀನ್ ಝೋನ್ ನಲ್ಲಿರುವ ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೈಗಾರಿಕೆ ಚಟುವಟಿಕೆ ಆರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ ಎನ್ನಲಾಗಿದೆ.

ಗಡಿ ಓಪನ್‌ ಡೌಟ್..!

ಸರಕು ಸಾಗಣೆಯಂತಹ ಅಗತ್ಯ ವಸ್ತುಗಳ ಸಂಚಾರ ಸೇವೆ ಹೊರತುಪಡಿಸಿ ಬೇರೆ ವಾಹನಗಳ ಓಡಾಟಕ್ಕೆ ಮೇ 3ರ ಬಳಿಕವೂ ತಕ್ಷಣ ಅನುಮತಿ ನೀಡಬಾರದು ಎಂದು ಗಡಿ ಜಿಲ್ಲೆಗಳ ಡಿಸಿಗಳು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೇ 3ರವರೆಗೆ ರಾಜ್ಯದ ಗಡಿ ಓಪನ್‌ ಮಾಡಬಾರದು. ರಾಜ್ಯದ ಒಳಗೂ ರೆಡ್‌ ಝೋನ್‌ ಜಿಲ್ಲೆಗಳಿಂದ ಆರೆಂಜ್‌, ಗ್ರೀನ್‌ ಝೋನ್‌ ಜಿಲ್ಲೆಗಳಿಗೆ ಪ್ರವೇಶ ನಿರ್ಭಂಧಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.




		
Leave a Reply

Your email address will not be published. Required fields are marked *

You May Also Like

ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಮಾರ್ಗ ಮಧ್ಯೆ ಅಡ್ಡಗಟ್ಟಿ ಯುವಕನ ಬರ್ಬರ ಕೊಲೆ!

ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಪಾಕ್ ನ ಉಪಟಳ – ಯೋಧ ಹುತಾತ್ಮ!

ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.