ರಾಜ್ಯದಲ್ಲಿ ಮೂರು ದಿನಗಳ ಕಾಲ ಇರಲಿದೆ ಭರಣಿಯ ಆರ್ಭಟ!
ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬಂಗಾಳ ಕೊಲ್ಲಿ, ಅರಬ್ಬಿ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಕಂಡಿದೆ. ಮಧ್ಯಪ್ರದೇಶದಿಂದ ತಮಿಳುನಾಡಿನವರೆಗೂ ಟ್ರಪ್ ನಿರ್ಮಾಣವಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇದು ಹೀಗೆಯೇ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗುರವಾಗಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಅಲ್ಲದೇ, ಹಲವು ಜಿಲ್ಲೆಗಳಲ್ಲಿಯೂ ಮಳೆ ಚನ್ನಾಗಿ ಸುರಿದಿದೆ.
ಭರಣಿ ಮಳೆ ಇಳೆಯನ್ನು ತಂಪಾಗಿಸುತ್ತಿರುವ ಕಾರಣ ರೈತ ಸಂಕುಲ ಸಂತಸ ವ್ಯಕ್ತಪಡಿಸುತ್ತಿದೆ. ಕೋಲಾರ ಚಿಕ್ಕಬಳ್ಳಾಪುರ ರಾಮನಗರ ಸೇರಿದಂತೆ ಕೆಲವು ಕಡೆಗಳಲ್ಲಿ ಜಿಟಿಜಿಟಿ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಕುರಿತು ವರದಿಯಾಗಿದೆ.

Leave a Reply

Your email address will not be published. Required fields are marked *

You May Also Like

ಧಾರವಾಡ ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ…

ಲಾಕ್ ಡೌನ್ ತೆರವಿಗೆ 3 ದಿನ ಬಾಕಿ : ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಲಾಕ್ ಡೌನ್ ಇದ್ದರೂ ದೇಶದಲ್ಲಿ ಕೊರೊನಾ ಹತೋಟಿಗೆ ಬರುತ್ತಿಲ್ಲ. ಲಾಕ್ ಡೌನ್ ತೆರವಿಗೆ 3 ದಿನಗಳು ಬಾಕಿ ಇರುವಾಗಲೇ ಶುಕ್ರವಾರ ದಾಖಲೆ ಪ್ರಮಾಣದ ಏರಿಕೆ ಕಂಡಿದೆ.

ಏಡ್ಸ್ ರೋಗ ಹತ್ತಿಕ್ಕಲು ಜನಜಾಗೃತಿ ಹೆಚ್ಚಳ-ಬಾಬುರಾವ ತಳವಾರ

ಆಲಮಟ್ಟಿ: 2030 ರೊಳಗೆ ಭಾರತದಲ್ಲಿ ಮಹಾಮಾರಿ ಏಡ್ಸ್ ರೋಗದ ಹಾವಳಿ ಸಂಪೂರ್ಣವಾಗಿ ತಡೆಗಟ್ಟಬೇಕಿದೆ. ಈ ಮಾರಕ…

ಪದವಿವೊಂದೇ ಸಾಲದು ಎಲ್ಲ ಜ್ಞಾನವೂ ಬೇಕು-ಡಾ.ಸಿ.ಎಂ.ಜೋಶಿ

ಉತ್ತರಪ್ರಭ ಸುದ್ದಿನಿಡಗುಂದಿ: ಅಧ್ಯಯನ ಕೇವಲ ಪದವಿ ಸಂಪಾದನೆಗೆ ಮಾತ್ರ ಸೀಮಿತವಾಗದೇ ಅದು ಸಮಗ್ರ ಜ್ಞಾನ ಪಡೆಯುವಂತಾಗಬೇಕು.…