ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಧಾರವಾಡಕ್ಕೆ ಷರತ್ತು ಬದ್ಧ ಸಡಿಲಿಕೆ ನೀಡಲಾಗಿದೆ. ಗ್ರಾಮೀಣ ಭಾಗಕ್ಕೆ ಕೂಡಾ ಸಡಿಲಿಕೆ ನೀಡಲಾಗಿದೆ. ಈಗಾಗಲೇ ಅಗತ್ಯ ಸರಕು ಸಾಗಣೆ, ಉತ್ಪಾದನೆಗೆ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಮುಗ್ಗಟ್ಟು ಕಾಯ್ದೆ ಅಡಿ ನೋಂದಾಯಿತ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರವಾಡ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಅಳ್ನಾವರ, ಕಲಘಟಗಿ ಹಾಗೂ ಕುಂದಗೋಳ ಪಟ್ಟಣಗಳ ಅಂಗಡಿಗಳಿ ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರವಾಡ ನಗರದಲ್ಲಿ ವಾರದಲ್ಲಿ ನಾಲ್ಕು ದಿನಗಳಾದ ಸೋಮವಾರದಿಂದ ಗುರುವಾರವರೆಗೆ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಯವರು ಲಿಖಿತ ಆದೇಶ ಹೊರಡಿಸುತ್ತಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಮನುಕುಲದ ಏಳಿಗೆಗಾಗಿ ಶ್ರಮಿಸಿದ ಸಂತ ಸೇವಾಲಾಲರು

ಶಿರಹಟ್ಟಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬೆಂಗಳೂರು, ತಾಲೂಕ ಘಟಕ ಶಿರಹಟ್ಟಿ ಹಾಗೂ ಬಂಜಾರ…

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…