ನವದೆಹಲಿ : ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಕಳೆದ ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ.

ಅಮೆರಿಕದಲ್ಲಿ ಕೊರೊನಾ ಅಬ್ಬರ ತಾಂಡವಾಡುತ್ತಿದ್ದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮಲೇರಿಯಾ ಔಷಧಿ ಮತ್ತು ಮಾತ್ರೆಗಳನ್ನು ನೀಡುವಂತೆ ಕೇಳಿಕೊಂಡಿದ್ದರು. ಅವರ ಮನವಿ ಸ್ವೀಕರಿಸಿದ್ದ ಪ್ರಧಾನಿ ಮೋದಿ, ಸಹಾಯ ಮಾಡಿದ್ದರು. ಇದಕ್ಕೆ ಕೃತಜ್ಞತೆ ಸಲ್ಲಿಸಿದ್ದ ಟ್ರಂಪ್, ಆ ಸಂದರ್ಭದಲ್ಲಿ ಮೋದಿ ಅವರನ್ನು ಕೊಂಡಾಡಿದ್ದರು.

ಆ ನಂತರ ಅಮೆರಿಕದ ಶ್ವೇತಭವನ ತನ್ನ ಅಧಿಕೃತ ಟ್ವಿಟ್ಟರ್ ಅಕೌಂಟ್‌ ಮೂಲಕ ಪ್ರಧಾನಿ ಮೋದಿ, ಪ್ರಧಾನಿ ಕಚೇರಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಷ್ಟ್ರಪತಿ ಭವನ, ಭಾರತದ ರಾಯಭಾರ ಕಚೇರಿ ಹಾಗೂ ಭಾರತದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯನ್ನು ಫಾಲೋ ಮಾಡಲು ಪ್ರಾರಂಭಿಸಿತ್ತು.

ಆದರೆ, ಸದ್ಯ ಪ್ರಧಾನಿ ಮೋದಿ ಅವರನ್ನು ಸೇರಿಸಿದಂತೆ ಒಟ್ಟು 6 ಅಕೌಂಟ್ ಗಳನ್ನು ಅನ್ ಫಾಲೋ ಮಾಡಿದೆ. ಯಾವ ಕಾರಣಕ್ಕೆ 6 ಅಕೌಂಟ್ ಗಳನ್ನು ಅನ್ ಫಾಲೋ ಮಾಡಿದೆ ಎಂಬುವುದು ಮಾತ್ರ ನಿಗೂಢವಾಗಿದೆ.

Leave a Reply

Your email address will not be published. Required fields are marked *

You May Also Like

ಮಗುವನ್ನು ಕದ್ದೋಯ್ದ ಕೋತಿಗಳು

ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.

ಗೋಧ್ರಾ ಹತ್ಯಾಕಾಂಡ: 19 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.