ಉಡುಪಿ : ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ಜಿಲ್ಲೆಯ ಅಲೆವೂರು ಗ್ರಾಪಂ ವ್ಯಾಪ್ತಿಯ ಕೊಡಂಗಳ ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ವೈರಾಣುಗಳ ಸಂಪರ್ಕಕ್ಕೆ ಬರುವ ಈ ಕಿಟ್ ಗನಳನ್ನು ಎಲ್ಲೆಂದರಲ್ಲಿ ಎಸೆದರೆ ರೋಗ ಹರಡುವ ಸಾಧ್ಯತೆ ಇದ್ದು, ಅದನ್ನು ಎಚ್ಚರಿಕೆಯಿಂದ ವಿಲೇವಾರಿ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ. ಆದರೆ, ವೈದ್ಯರು ಬಳಕೆ ಮಾಡಿದ್ದ ಈ ಕಿಟ್ ನೋಡಿದ ಜನರು ಆತಂಕದಲ್ಲಿ ಇದ್ದಾರೆ.
ಮೇಲ್ನೋಟಕ್ಕೆ ಇದು ಬಳಸಿ ಎಸೆದ ಕಿಟ್ ನಂತೆ ಕಾಣುತ್ತಿದ್ದು, ಸ್ಥಳೀಯ ಆಶಾ ಕಾರ್ಯಕರ್ತೆ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಂಗಳ ನದಿಯ ಸೇತುವೆಯ ಮೇಲ್ಭಾಗದಿಂದ ಇದನ್ನು ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ನದಿಯ ನೀರನ್ನು ಗ್ರಾಮಸ್ಥರು ಬಳಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಯೋಧನ ಸಮಯ ಪ್ರಜ್ಞೆಯಿಂದ ಕರುಳು ಬಳ್ಳಿ ಸೇರಿದ ಅಜ್ಜಿ..!

ಅರ್ಥವಾಗದ ಊರು, ತಿಳಿದ ಭಾಷೆಯ ಮದ್ಯೆ ಏಕಾಂಗಿಯಾದ ಅಜ್ಜಿ ತನ್ನವರಿಗಾಗಿ ಅಳುತ್ತಿದ್ದಳು. ಅಜ್ಜಿಯ ಆರ್ಥನಾದ ಅಲ್ಲಿರುವ ಯಾರ ಗಮನಕ್ಕೂ ಬರಲೇ ಇಲ್ಲ. ಕಣ್ಣೀರಿಡುತ್ತಿದ್ದ ಇಳಕಲ್ ಸೀರೆಯುಟ್ಟ ಹಿರಿಯ ಜೀವ ಕರುನಾಡಿನವಳುವೆಂದರಿತಯೋಧ ಅಜ್ಜಿಯ ಆರ್ಥನಾದಕ್ಕೆ ಧ್ವನಿಯಾಗಿದ್ದಾರೆ. ತನ್ನವರನ್ನು ಕಳೆದುಕೊಂಡ ಅಜ್ಜಿಗೆ ತನ್ನ ಬಂಧು ಬಳಗದೊಂದಿಗೆ ತಳುಕು ಹಾಕುವ ಮೂಲಕ ಜಿಲ್ಲೆಯ ಮುಂಡರಗಿ ಸೈನಿಕ ಜನರ ಮೆಚ್ಚುಗೆಯ ಜೊತೆಗೆ ಸೈ ಎನಿಸಿಕೊಂಡಿದ್ದಾರೆ.

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.