ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ಆದಾಗ್ಯೂ ಜನರು ಮಾತ್ರ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಜನರ ವರ್ತನೆಗೆ ಬೇಸತ್ತು ಪೊಲೀಸರು ಬೀದರ್ ನಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದವರಿಗೆ ಬಿಸಿ ಬಿಸಿ ಕಜ್ಜಾಯ ನೀಡಿದ್ದಾರೆ. ಡಿವೈಎಸ್ಪಿ ಬಸವೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಈ ಮೂಲಕ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅನವಶ್ಯಕವಾಗಿ ರಸ್ತೆಗಿಳಿದ ವಾಹನಗಳನ್ನು
ವಶಕ್ಕೆ ಪಡೆದಿದ್ದಾರೆ. ಬೀದರ್ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪಾಸ್ ಇಲ್ಲದೆ ಓಡಾಡುತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.