ನವದೆಹಲಿ : ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯಸೇತು ಆಪ್ ಅನ್ನು ಕಡ್ಡಾಯವಾಗಿ  ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಸಚಿವಾಲಯ ಹೊರಡಿಸಿರುವ  ಜ್ಞಾಪನ ಪತ್ರದಲ್ಲಿ ಯಾವುದೇ ಸಿಬ್ಬಂದಿ ಕಚೇರಿಗೆ ತೆರಳುವ ಮೊದಲು, ಅಪ್ಲಿಕೇಶನ್‌ನಲ್ಲಿ ತಮ್ಮ ಸ್ಥಿತಿ ಪರೀಕ್ಷಿಸಿಕೊಳ್ಳಬೇಕು. ಅದು ಸುರಕ್ಷಿತ ಎಂದು ತೋರಿಸಿದಾಗ ಮಾತ್ರ ಕಚೇರಿಗೆ ಆಗಮಿಸಬೇಕು ಎಂದು  ಸರ್ಕಾರ ಹೇಳಿದೆ.

ಕೊರೊನಾ ಸೋಂಕಿತ ವ್ಯಕ್ತಿಗೆ ಅಥವಾ ಸೋಂಕಿತ ವ್ಯಕ್ತಿಯೊಂದಿಗೆ ಇತ್ತೀಚಿನ ಸಂಪರ್ಕಕ್ಕೆ ಬಳಕೆದಾರ ಅಥವಾ ಉದ್ಯೋಗಿ ಬಂದರೆ, ಅವನ ಅಥವಾ ಸ್ಥಳದ ಆಧಾರದ ಮೇಲೆ ಅಪಾಯದ ಕುರಿತು ಅಪ್ಲಿಕೇಶನ್, ಸಂದೇಶ ನೀಡಿದರೆ, ಅಂತಹ ಸಿಬ್ಬಂದಿ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕು.

ಆರೋಗ್ಯ ಸೇತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್‌. ಇದರ ಬಳಕೆಯಿಂದ ಕೊರೊನಾ ಸೋಂಕಿನ ಅಪಾಯ ಗುರುತಿಸಬಹುದು. 10 ಭಾರತೀಯ ಭಾಷೆಗಳು ಹಾಗೂ ಇಂಗ್ಲಿಷ್‌ನಲ್ಲಿ ಈ ಅಪ್ಲಿಕೇಶನ್ ಲಭ್ಯವಿದೆ.

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…

ಪಾಸಿಟಿವ್ ಗರ್ಭಿಣಿಗೆ ಸಿಸೇರಿನ್: ಗದಗ ಜಿಮ್ಸ್ ನ ಅಪರೂಪದ ಸಾಧನೆ

ಗದಗ: ಇದು ಗದಗಿನ ಜಿಮ್ಸ್ ವೈದ್ಯರು ನಡೆಸಿದ ‘ಆಪರೇಷನ್ ಪಾಸಿಟಿವ್’ ಕಾರ್ಯಾಚರಣೆ. ಶುಕ್ರವಾರವಷ್ಟೇ ಪಾಸಿಟಿವ್ ದೃಢಪಟ್ಟಿದ್ದ…

ಭಾರಿ ಮಳೆಗೆ ಹಾರಿ ಹೋದ ಮೇಲ್ಛಾವಣಿ

ಹಾವೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಮೇತ ಮಳೆ ಹಿನ್ನೆಲೆ ಬಿರುಗಾಳಿ ಹೊಡೆತಕ್ಕೆ ಸರ್ಕಾರಿ ಶಾಲೆಯ ಚಾವಣಿ ಹಾರಿ…

ಶಾಲಾ ಕಾಲೇಜುಗಳಿಗೆ 12 ರಿಂದ 16ರ ವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ,…