ನವದೆಹಲಿ : ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯಸೇತು ಆಪ್ ಅನ್ನು ಕಡ್ಡಾಯವಾಗಿ  ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಸಚಿವಾಲಯ ಹೊರಡಿಸಿರುವ  ಜ್ಞಾಪನ ಪತ್ರದಲ್ಲಿ ಯಾವುದೇ ಸಿಬ್ಬಂದಿ ಕಚೇರಿಗೆ ತೆರಳುವ ಮೊದಲು, ಅಪ್ಲಿಕೇಶನ್‌ನಲ್ಲಿ ತಮ್ಮ ಸ್ಥಿತಿ ಪರೀಕ್ಷಿಸಿಕೊಳ್ಳಬೇಕು. ಅದು ಸುರಕ್ಷಿತ ಎಂದು ತೋರಿಸಿದಾಗ ಮಾತ್ರ ಕಚೇರಿಗೆ ಆಗಮಿಸಬೇಕು ಎಂದು  ಸರ್ಕಾರ ಹೇಳಿದೆ.

ಕೊರೊನಾ ಸೋಂಕಿತ ವ್ಯಕ್ತಿಗೆ ಅಥವಾ ಸೋಂಕಿತ ವ್ಯಕ್ತಿಯೊಂದಿಗೆ ಇತ್ತೀಚಿನ ಸಂಪರ್ಕಕ್ಕೆ ಬಳಕೆದಾರ ಅಥವಾ ಉದ್ಯೋಗಿ ಬಂದರೆ, ಅವನ ಅಥವಾ ಸ್ಥಳದ ಆಧಾರದ ಮೇಲೆ ಅಪಾಯದ ಕುರಿತು ಅಪ್ಲಿಕೇಶನ್, ಸಂದೇಶ ನೀಡಿದರೆ, ಅಂತಹ ಸಿಬ್ಬಂದಿ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕು.

ಆರೋಗ್ಯ ಸೇತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್‌. ಇದರ ಬಳಕೆಯಿಂದ ಕೊರೊನಾ ಸೋಂಕಿನ ಅಪಾಯ ಗುರುತಿಸಬಹುದು. 10 ಭಾರತೀಯ ಭಾಷೆಗಳು ಹಾಗೂ ಇಂಗ್ಲಿಷ್‌ನಲ್ಲಿ ಈ ಅಪ್ಲಿಕೇಶನ್ ಲಭ್ಯವಿದೆ.

Leave a Reply

Your email address will not be published. Required fields are marked *

You May Also Like

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.

ರೈತರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಬಳಸುವ ವಿಧಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಅಗಸ್ಟ 11 ರಿಂದ ಗದಗ ಜಿಲ್ಲೆಯಾದ್ಯಂತ…

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ರಾಜ್ಯದಲ್ಲಿ ಇಂದು 8 ಸಾವಿರದ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 8,477 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆ ಕಂಡಿದೆ.