ಮುಂಬಯಿ : ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ. ಇಲ್ಲಿಯ ಎಚ್ಎಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರಿಗ ಉಸಿರಾಟದ ತೊಂದರೆಯಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಫೆಬ್ರವರಿಯಲ್ಲಿ ರಿಷಿ ಕಪೂರ್ ಅವರನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ರಿಷಿ ಅವರು ಮೊದಲ ಬಾರಿಗೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೆಲವು ಸೋಂಕಿನಿಂದ ಬಳಲುತ್ತಿದ್ದರು. ಮುಂಬಯಿಗೆ ಮರಳಿದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಸದ್ಯ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಗಾಂಧೀಜಿ ಪ್ರತಿಮೆ ದ್ವಂಸಗೊಳಿಸಿದ ಕಿಡಿಗೇಡಿಗಳು

ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…