ಹಾವೇರಿ: ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆರ್ಥಿಕ ಚಟುವಟುಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಆದ್ರೆ ಗ್ರೀನ್ ಝೋನ್ ಸಡಿಲಿಕೆಗೂ ಕೆಲವೊಂದು ನಿಯಮಗಳಿಗೆ ಹಾವೇರಿ ಜನ ಕ್ಯಾರೆ ಎನ್ನುತ್ತಿಲ್ಲ. ನಗರದ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿಯಾಗಿ ಜನರು ತಿರುಗಾಡುತ್ತಿರುವುದು ಕಂಡುಬಂದಿತು. ರಾಜ್ಯ ಸರ್ಕಾರದ ಆದೇಶ ಗಾಳಿಗೆ ತೂರಿ ವ್ಯಾಪಾರ ವಹಿವಾಟಿಗೆ ದಿನಸಿ ಆಂಗಡಿಗಳು ಮುಂದಾಗಿವೆ.

ಇನ್ನು ಕೆಲ ಅಂಗಡಿ ಮಾಲೀಕರಿಂದ, ವ್ಯಾಪರಸ್ಥರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆದಿತ್ತು. ಲಾಲ್ ಬಹದ್ದೂರ ಶಾಸ್ತ್ರೀ ಮಾರುಕಟ್ಟೆಯಲ್ಲಿಯೂ  ಜನಸಂಚಾರ ಗಿಜಿಗುಡುತ್ತಿತ್ತು. ಗುಂಪುಗುಂಪಾಗಿ ಸೇರಿ ಖರೀದಿಗೆ ಸಾರ್ವಜನಿಕರು ಮುಂದಾದದ ಸನ್ನಿವೇಶ ಸಾಮಾನ್ಯವಾಗಿತ್ತು. ಈಗಾಗಲೇ ಹಾವೇರಿ ಗ್ರೀನ್ ಝೋನ್ ನಲ್ಲಿರುವುದರಿಂದ ಜನರು ಈ ರೀತಿ ವರ್ತಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ.

Leave a Reply

Your email address will not be published. Required fields are marked *

You May Also Like

ಶಾಮನೂರು ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ರೈಡ್

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ವಾಟ್ಸಾಪ್ ಬಗ್ಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ

ವಾಟ್ಸಾಪ್ ಬಳಕೆದಾರರಿಗೆ ಹೊಸ ಮಾಹಿತಿಯೊಂದು ಇಲ್ಲಿದೆ. ವಾಟ್ಸಾಪ್ ಬಳಕೆದಾರರು ಸ್ಮಾರ್ಟ ಫೋನ್ ಗಳಲ್ಲಿ ವಾಟ್ಸಾಪ್ ಲಾಗೌಟ್ ಮಾಡಬಹುದಾಗಿದೆ.

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಸಾರಾಯಿ ಸೀಸೆಗಾಗಿ ಬಾರ್ ಮುಂದೆ ಕ್ಯೂ..!

ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ…!