ನವದೆಹಲಿ : ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ. ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು.

ಈವಗಾಗಲೆ ದೇಶದ ಆರ್ಥಿಕ ಸ್ಥಿತಿ, ಮತ್ತಿತರ ವಿಷಯಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಡಿಯೋ ಮೂಲಕ ಮಾತುಕತೆ ನಡೆಸುತ್ತಿದ್ದಾರೆ. ಈ ವಿಡಿಯೋ ಸರಣಿಯಲ್ಲಿ ಮೊದಲ ಅತಿಥಿಯಾಗಿ ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್ ಮಾತನಾಡಿದ್ದಾರೆ. ಬಡವರ ಹೊಟ್ಟೆ ತುಂಬಿಸಲು ದೇಶಕ್ಕೆ ರೂ.65 ಸಾವಿರ ಕೋಟಿ ಅಗತ್ಯವಿದೆ. ಜಿಡಿಪಿ ರೂ. 200 ಲಕ್ಷ ಕೋಟಿಯಾಗಿರುವುದರಿಂದ ಭಾರತ ಅದನ್ನು ಭರಿಸಬಲ್ಲದು. ದೇಶದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರಿಂದ ಇಂತಹ ಸಂದರ್ಭದಲ್ಲಿ ಸಾಮಾಜಿಕ ಸಾಮರಸ್ಯ ಅತ್ಯಂತ ಮುಖ್ಯವಾಗಿದೆ. ಸವಾಲುಗಳು ದೊಡ್ಡದಾದಾಗ ಮನೆಗಳನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಡವರಿಗೆ ಡಿಬಿಟಿ, ಮನ್ರೇಗಾ, ವಯೋವೃದ್ಧರಿಗೆ ಪಿಂಚಣಿ ಹಾಗೂ ಪಿಡಿಎಸ್ ಮೂಲಕ ಹಣ ನೀಡಿ ಬೆಂಬಲಿಸಬೇಕಿದೆ. ಪ್ರಸ್ತತ ಬಡವರ ಹಸಿವು ನೀಗಿಸುವಲ್ಲಿ ದೇಶದ ಸಾಮರ್ಥ್ಯ ಕಡಿಮೆಯಿದ್ದು, ಇಂತಹ ಸಂದರ್ಭದಲ್ಲಿ ಭಾರತ ಅತ್ಯಂದ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದ ವ್ಯಕ್ತಿಯಲ್ಲಿ ಕಂಡು ಬಂದ ಕೊರೊನಾ!

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದ ವೃದ್ಧರೊಬ್ಬರಲ್ಲಿ ಮತ್ತೆ ಕೊರೊನಾ ವೈರಸ್ ಕಂಡು ಬಂದಿದೆ. 60…

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…