ನವದೆಹಲಿ : ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ. ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು.

ಈವಗಾಗಲೆ ದೇಶದ ಆರ್ಥಿಕ ಸ್ಥಿತಿ, ಮತ್ತಿತರ ವಿಷಯಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಡಿಯೋ ಮೂಲಕ ಮಾತುಕತೆ ನಡೆಸುತ್ತಿದ್ದಾರೆ. ಈ ವಿಡಿಯೋ ಸರಣಿಯಲ್ಲಿ ಮೊದಲ ಅತಿಥಿಯಾಗಿ ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್ ಮಾತನಾಡಿದ್ದಾರೆ. ಬಡವರ ಹೊಟ್ಟೆ ತುಂಬಿಸಲು ದೇಶಕ್ಕೆ ರೂ.65 ಸಾವಿರ ಕೋಟಿ ಅಗತ್ಯವಿದೆ. ಜಿಡಿಪಿ ರೂ. 200 ಲಕ್ಷ ಕೋಟಿಯಾಗಿರುವುದರಿಂದ ಭಾರತ ಅದನ್ನು ಭರಿಸಬಲ್ಲದು. ದೇಶದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರಿಂದ ಇಂತಹ ಸಂದರ್ಭದಲ್ಲಿ ಸಾಮಾಜಿಕ ಸಾಮರಸ್ಯ ಅತ್ಯಂತ ಮುಖ್ಯವಾಗಿದೆ. ಸವಾಲುಗಳು ದೊಡ್ಡದಾದಾಗ ಮನೆಗಳನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಡವರಿಗೆ ಡಿಬಿಟಿ, ಮನ್ರೇಗಾ, ವಯೋವೃದ್ಧರಿಗೆ ಪಿಂಚಣಿ ಹಾಗೂ ಪಿಡಿಎಸ್ ಮೂಲಕ ಹಣ ನೀಡಿ ಬೆಂಬಲಿಸಬೇಕಿದೆ. ಪ್ರಸ್ತತ ಬಡವರ ಹಸಿವು ನೀಗಿಸುವಲ್ಲಿ ದೇಶದ ಸಾಮರ್ಥ್ಯ ಕಡಿಮೆಯಿದ್ದು, ಇಂತಹ ಸಂದರ್ಭದಲ್ಲಿ ಭಾರತ ಅತ್ಯಂದ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…