ಬೆಳಗಾವಿ: ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ. ದ್ವಿಚಕ್ರವಾಹನದಲ್ಲಿ ಬಂದ ಮಹಿಳೆಯರಿಗೆ ಕೈ ಮುಗಿದು ಬೇಡಿಕೊಮಡ ಘಟನೆ ಬೆಳಗಾವಿ ನಗರದ ಅಶೋಕ ವೃತ್ತದಲ್ಲಿ ನಡೆದಿದೆ.

ಇನ್ನು ಪರಿಪರಿಯಾಗಿ ಬೇಡಿಕೊಂಡಾಗಲೂ ಮಾತು ಕೇಳದ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದ್ರು. ಬೆಳಗಾವಿಯಲ್ಲಿ 55 ಕೊರೊನಾ ಪ್ರಕರಣ ಪತ್ತೆಯಾದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಗಡಿನಾಡು ಬೆಳಗಾವಿ ಹೆಬ್ಬಾಗಿಲಲ್ಲಿ ಕೋರೊನಾ ಹೆಚ್ಚುತ್ತಲೆ ಇದೆ. ಇಂದು ಒಂದೇ ದಿನ ಪತ್ತೆಯಾದ 14 ಕೋರೊನಾ ಪ್ರಕರಣ ಪತ್ತೆಯಾಗಿವೆ. ಹೀಗಾಗಿ ಕುಂದಾನಗರಿಗೆ ಮತ್ತೆ ಕಿಲ್ಲರ್ ಕೋರೊನಾ ವೈರಸ್ ಕಂಟಕವಾಗಿದೆ. ಒಂದೇ ದಿನ ಹಿರೇಬಾಗೇವಾಡಿಯಲ್ಲಿ 11 ಹಾಗೂ ಸಂಕೇಶ್ವರದಲ್ಲಿ 3 ಕೋರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈಗಾಗಲೇ ಬೆಳಗಾವಿ ರೆಡ್‌ಝೋನ್‌ನಲ್ಲಿ ಇದ್ದರೂ ಕುಂದಾನಗರಿ ಜನರು ಕ್ಯಾರೇ ಎನ್ನುತ್ತಿಲ್ಲ. ಅನಗತ್ಯವಾಗಿ ರಸ್ತೆಗಿಳಿಯುವವರನ್ನು ವಾಪಸ್ ಕಳಿಸಲು ಪೊಲೀಸರೇ ಸುಸ್ತಾದರು. ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲಿದ್ದರೂ ಜನರಲ್ಲಿ ಗಂಭೀರತೆ ಕಾಣದಿರುವುದು ವಿಪರ್ಯಾಸ.

Leave a Reply

Your email address will not be published. Required fields are marked *

You May Also Like

ಅಗಡಿ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ನಗರದ ಪ್ರತಿಷ್ಠಿತ ಶ್ರೀಮತಿ.ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..

ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ

ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.