ನವದೆಹಲಿ : ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಸೇನೆ ಎಚ್ಚರಿಸಿದೆ. ಆರೋಗ್ಯ ಸೇತು ಆ್ಯಪ್ ನಂತಹುದ್ದೇ ಮತ್ತೊಂದು ಆ್ಯಪ್ ಅನ್ನು ಸಿದ್ಧಪಡಿಸಿ ಆ ಮೂಲಕ ಭಾರತೀಯ ಸೈನಿಕರ ಮೇಲೆ ನಿಗಾ ಇಡುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದೆ.

ನಕಲಿ ಆರೋಗ್ಯ ಸೇತು ಆ್ಯಪ್ ಮೂಲಕ ಭಾರತೀಯ ಮಿಲಿಟರಿ ಪಡೆಯ ಫೋನ್ ಗಳನ್ನು ಹ್ಯಾಕ್ ಮಾಡಿ ಆ ಮೂಲಕ ಸೈನಿಕರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕಾಗಿ ಆರೋಗ್ಯ ಸೇತು. ಎಪಿಕೆ (Aarogya Setu.apk.) ನಂತಹ ನಕಲಿ ಆ್ಯಪ್ ಸೃಷ್ಟಿ ಮಾಡಿದೆ.

ಪಾಕಿಸ್ತಾನ ಮೂಲದ ಆಪರೇಟರ್ ಗಳು ಇದನ್ನು ವಾಟ್ಸಪ್ ಮೂಲಕ ಭಾರತದ ಸೇನಾಧಿಕಾರಿಗಳ ಮೊಬೈಲ್ ಗೆ ರವಾನಿಸುತ್ತಿದ್ದಾರೆ ಎಂದು ಹೇಳಿದೆ. ಇತ್ತೀಚೆಗಷ್ಟೇ ಭಾರತದ ಎಲ್ಲ ಸೈನಿಕರೂ ಆ್ಯಪ್ ಡೌನ್ಲೋಡ್ ಮಾಡಿ ಬಳಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿತ್ತು. ಆದರೆ ಸರ್ಕಾರದ ಸದುದ್ದೇಶವನ್ನು ಪಾಕಿಸ್ತಾನ ತನ್ನ ನೀಚ ಕೃತ್ಯಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ.

Leave a Reply

Your email address will not be published. Required fields are marked *

You May Also Like

ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..!

ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ…

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…