ನವದೆಹಲಿ : ಲಾಕ್ ಡೌನ್ ಇದ್ದರೂ ದೇಶದಲ್ಲಿ ಕೊರೊನಾ ಹತೋಟಿಗೆ ಬರುತ್ತಿಲ್ಲ. ಲಾಕ್ ಡೌನ್ ತೆರವಿಗೆ 3 ದಿನಗಳು ಬಾಕಿ ಇರುವಾಗಲೇ ಶುಕ್ರವಾರ ದಾಖಲೆ ಪ್ರಮಾಣದ ಏರಿಕೆ ಕಂಡಿದೆ.
ಮಹಾಮಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 24 ಗಂಟೆಗಳಲ್ಲಿ 1,993 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 35,043ಕ್ಕೆ ಏರಿಕೆ ಕಂಡಿದೆ. ಒಂದೇ ದಿನದಲ್ಲಿ 73 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಈ ಮೂಲಕ 1,147ಕ್ಕೆ ಏರಿಕೆಯಾಗಿದೆ.
ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 10,478 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಗುಜರಾತ್ 4,082, ದೆಹಲಿ 3,515, ಮಧ್ಯಪ್ರದೇಶ 2,660, ರಾಜಸ್ತಾನ 2,438, ಉತ್ತರಪ್ರದೇಶ 2,203, ತಮಿಳುನಾಡು 2,162, ಆಂಧ್ರಪ್ರದೇಶದಲ್ಲಿ 403 ಜನರಲ್ಲಿ ಸೋಂಕು ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…

ನೀರಾವರಿ ಹೆಚ್ಚಿನ ಅನುದಾನಕ್ಕೆ ಆಗ್ರಹ ಬೇಡಿಕೆ ಈಡೇರಿಕೆಗಾಗಿ ಉರುಳು ಸೇವೆ

ಆಲಮಟ್ಟಿ; ಜಿಲ್ಲೆಯ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ…