ಬೆಂಗಳೂರು : ಚಿತ್ರರಂಗದ ಕನಸು ಹೊತ್ತ ಯುವ ನಿರ್ದೇಶಕ ಸಂದೇಶ್ ಶೆಟ್ಟಿ ಅಜ್ರಿ ಇದೀಗ ತನ್ನ ಕನಸಿನ ಬಹುಭಾಷಾ ಸಿನಿಮಾದ ತಯಾರಿಯಲ್ಲಿದ್ದಾರೆ.

2018ರಲ್ಲಿ ಕತ್ತಲೆ ಕೋಣೆ ಎನ್ನುವ ಸಿನಿಮಾದ ಮೂಲಕ ನಿರ್ದೇಶಕ ಹಾಗೂ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಸಂದೇಶ್ ಭಿನ್ನವಾದ ಕಥೆಯ ಹಂದರವನ್ನು ಇಟ್ಟುಕೊಂಡು ಸಿನಿಮಾ ಮಾಡುವ ಛಾಯೆ ಇವರದು. ಒಬ್ಬ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಯುವಕ ನಾಟಕ ಹಾಡುಗಾರಿಕೆ ಸಿನಿಮಾದ ಕಡೆಗೆ ಆಸಕ್ತಿ ವಹಿಸಿದರು.ಈ ಬಾರಿಯ ಇವರ ಸಿನಿಮಾದಲ್ಲಿ ಸಸ್ಪೆನ್ಸ್ ,ಸೈನ್ಸ್ ಫಿಕ್ಷನ್ ಕಥೆಯ ಸಾರಾಂಶ ಇದ್ದು ಬಾಲಿವುಡ್ ಸ್ಯಾಂಡಲ್ ವುಡ್ ಹಾಗೂ ತಮಿಳಿನ ಖ್ಯಾತ ನಾಯಕರನ್ನು ಸಿನಿಮಾದಲ್ಲಿ ತೋರಿಸಲಿದ್ದಾರೆ.

ಕ್ರಿಯಾಶೀಲತೆಗೆ ಹಾಗೂ ತಾನು ಮಾಡುವ ಕಥೆಯ ಒಳಗೆ ಹೊಕ್ಕು ಜನರಿಗೆ ಭಿನ್ನವಾದ ಸಿನಿಮಾ ನೀಡುವ ಉದ್ದೇಶ ಈ ಯುವ ನಿರ್ದೇಶಕನದ್ದು. ಈ ಬಾರಿಯ ಇವರ ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ಅನ್ಯಗ್ರಹದ ಜೀವಿಯ ಪಾತ್ರದಲ್ಲಿ ಕಾಣಿಸಿಕೋಳ್ಳಲ್ಲಿದ್ದಾರೆ. ಕಥೆ ಚಿತ್ರಕಥೆ ಎಲ್ಲವೂ ರೆಡಿಯಾಗಿದ್ದು ಇನ್ನಷ್ಟೇ ಚಿತ್ರೀಕರಣ ಪ್ರಾರಂಭವಾಗಬೇಕಿದೆ ಮುಂದಿನ ದಿನಗಳಲ್ಲಿ ಬಾಲಿವುಡ್ನಲ್ಲಿ ಮಿಂಚಬೇಕು ಅನ್ನುವ ಕನಸು ಹೊತ್ತ ನಿರ್ದೇಶಕ ಸಂದೇಶ ರವರ ಬಾಲಿವುಡ್ ಕನಸು ನನಸಾಗಲಿ ಅನ್ನುವುದೇ ನಮ್ಮ ಹಾರೈಕೆ. ಅನ್ಯಗ್ರಹ ಜೀವಿ ಆ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಂದೇಶ ತಮ್ಮ ದೇಹವನ್ನು ಭಿನ್ನವಾಗಿ ಸಿದ್ದ ಪಡಿಸಿಕೊಳ್ಳುತ್ತಿದ್ದಾರೆ ಆಲ್ ದ ಬೆಸ್ಟ್ ಸಂದೇಶ್.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ನಟ ಸುಶಾಂತ್ ಪ್ರಕರಣದ ತನಿಖೆ ಕೊನೆಗೊಳಿಸಲು ನಿರ್ಧರಿಸಿದ ಸಿಬಿಐ!

ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ರಾಜ್ಯದಲ್ಲಿಂದು 267 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ.

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…