ನವದೆಹಲಿ : ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನೂತನ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಬೆಂಗಳೂರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳು ಕೆಂಪು ವಲಯದಲ್ಲಿ ಸೇರ್ಪಡೆಗೊಂಡಿವೆ. ಮೇ. 3ರ ನಂತರ ಲಾಕ್‌ಡೌನ್ ತೆರೆಯುವ ಯೋಜನೆಗೆ ಇದು ಸಹಕಾರಿಯಾಗಲಿದೆ ಎನ್ನಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ವ್ಯಾಪಾರ ವ್ಯವಹಾರಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲಿದೆಯೇ ಅಥವಾ ನಿಷೇಧ ಮುಂದುವರೆಯಲಿದೆಯೇ ಎಂಬುವುದುನ್ನು ಕಾದು ನೋಡಬೇಕಿದೆ.

ಜಿಲ್ಲೆಗಳನ್ನು ರೆಡ್ ಜೋನ್, ಆರೆಂಜ್ ಜೋನ್ ಹಾಗೂ ಗ್ರೀನ್ ಜೋನ್ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಸದ್ಯ ಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಈ ರಾಜ್ಯದಲ್ಲಿಯೇ ಇದ್ದಾರೆ. ಹೀಗಾಗಿ ಮಹಾರಾಷ್ಟ್ರದ 14 ಜಿಲ್ಲೆಗಳನ್ನು ರೆಡ್ ಜೋನ್ ಗೆ ಸೇರ್ಪಡೆ ಮಾಡಲಾಗಿದೆ. ದೆಹಲಿಯಲ್ಲಿ 11 ಜಿಲ್ಲೆಗಳು, ತಮಿಳುನಾಡಿನಲ್ಲಿ 12 ಜಿಲ್ಲೆಗಳು, ಉತ್ತರ ಪ್ರದೇಶದ 19 ಜಿಲ್ಲೆಗಳು, ಪಶ್ಚಿಮ ಬಂಗಾಳದ 10 ಜಿಲ್ಲೆಗಳು, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ತಲಾ 9 ಜಿಲ್ಲೆಗಳು ಮತ್ತು ರಾಜಸ್ಥಾನದ 8 ಜಿಲ್ಲೆಗಳು ಕರ್ನಾಟಕದ 3 ಜಿಲ್ಲೆಗಳು ರೆಡ್ ಜೋನ್ ವ್ಯಾಪ್ತಿಯಲ್ಲಿವೆ.

Leave a Reply

Your email address will not be published. Required fields are marked *

You May Also Like

ಗುಲಗಂಜಿಕೊಪ್ಪ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಗದಗನಲ್ಲಿ ಕಂದಮ್ಮಳಿಗೆ ಕೊರೊನಾ ಕಾಟ : ಇಂದು 4 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203…

ತೋಟಗಾರಿಕೆ ಬೆಳೆಗಳಿಗೆ ವಿಮಾ ಕಂತು ಪಾವತಿಗೆ ಜೂನ್ 30 ಕೊನೆಯ ದಿನ

ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಮತ್ತು ಪಪ್ಪಾಯ (ಪರಂಗಿ) ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ಬಜಾಜ್ ಅಲೆನ್ಸ್ ಇನ್ಸೂರೆನ್ಸ ಕಂಪನಿ ವಿಮೆ ನೀಡಲಿದೆ.