ನವದೆಹಲಿ : ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನೂತನ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಬೆಂಗಳೂರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳು ಕೆಂಪು ವಲಯದಲ್ಲಿ ಸೇರ್ಪಡೆಗೊಂಡಿವೆ. ಮೇ. 3ರ ನಂತರ ಲಾಕ್‌ಡೌನ್ ತೆರೆಯುವ ಯೋಜನೆಗೆ ಇದು ಸಹಕಾರಿಯಾಗಲಿದೆ ಎನ್ನಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ವ್ಯಾಪಾರ ವ್ಯವಹಾರಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲಿದೆಯೇ ಅಥವಾ ನಿಷೇಧ ಮುಂದುವರೆಯಲಿದೆಯೇ ಎಂಬುವುದುನ್ನು ಕಾದು ನೋಡಬೇಕಿದೆ.

ಜಿಲ್ಲೆಗಳನ್ನು ರೆಡ್ ಜೋನ್, ಆರೆಂಜ್ ಜೋನ್ ಹಾಗೂ ಗ್ರೀನ್ ಜೋನ್ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಸದ್ಯ ಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಈ ರಾಜ್ಯದಲ್ಲಿಯೇ ಇದ್ದಾರೆ. ಹೀಗಾಗಿ ಮಹಾರಾಷ್ಟ್ರದ 14 ಜಿಲ್ಲೆಗಳನ್ನು ರೆಡ್ ಜೋನ್ ಗೆ ಸೇರ್ಪಡೆ ಮಾಡಲಾಗಿದೆ. ದೆಹಲಿಯಲ್ಲಿ 11 ಜಿಲ್ಲೆಗಳು, ತಮಿಳುನಾಡಿನಲ್ಲಿ 12 ಜಿಲ್ಲೆಗಳು, ಉತ್ತರ ಪ್ರದೇಶದ 19 ಜಿಲ್ಲೆಗಳು, ಪಶ್ಚಿಮ ಬಂಗಾಳದ 10 ಜಿಲ್ಲೆಗಳು, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ತಲಾ 9 ಜಿಲ್ಲೆಗಳು ಮತ್ತು ರಾಜಸ್ಥಾನದ 8 ಜಿಲ್ಲೆಗಳು ಕರ್ನಾಟಕದ 3 ಜಿಲ್ಲೆಗಳು ರೆಡ್ ಜೋನ್ ವ್ಯಾಪ್ತಿಯಲ್ಲಿವೆ.

Leave a Reply

Your email address will not be published. Required fields are marked *

You May Also Like

ಕುಡಿದು ಬಂದು ಜಗಳ ಮಾಡುತ್ತಿದ್ದ ನಿರುದ್ಯೋಗ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗಳು!

ಭೋಪಾಲ್ : ತಂದೆಯನ್ನೇ ಕೊಲೆ ಮಾಡಿದ 16ರ ಬಾಲಕಿ ಪೊಲೀಸರಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಬೆಳ್ಳುಬ್ಬಿ ಭರವಸೆ; ಆಲಮಟ್ಟಿ ಅಹೋರಾತ್ರಿ ಧರಣಿ ಹಿಂದಕ್ಕೆ

ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕೃಷ್ಣಾ ಭಾಗ್ಯ ಜಲನಿಗಮ ಮುಖ್ಯ ಎಂಜಿನಿಯರ್ ಕಚೇರಿ…

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ

ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.