ಬೆಂಗಳೂರು : ರಾಜ್ಯದಲ್ಲಿ ಇಂದು ನೂತನವಾಗಿ 11 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಕಂಡಿದೆ. ಈ ಪೈಕಿ 22 ಜನ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೂ 235 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ 8, ಬೆಳಗಾವಿ ಜಿಲ್ಲೆಯಲ್ಲಿ 3 ಪ್ರಕರಣಗಳು ಇಂದು ಹೊಸದಾಗಿ ಪತ್ತೆಯಾಗಿವೆ. ಮಂಡ್ಯದ 25 ವರ್ಷದ ಯುವಕ 566ನೇ ಸೋಂಕಿತನಾಗಿದ್ದು, ಮುಂಬಯಿ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆ ಹೊಂದಿದ್ದಾನೆ. ಮಂಡ್ಯದ 24 ವರ್ಷದ ಯುವತಿ 567ನೇ ರೋಗಿಯಾಗಿದ್ದು, ಮುಂಬಯಿ, ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. 568 ರೋಗಿ ಮಂಡ್ಯದ 27 ವರ್ಷದ ಯುವಕನಾಗಿದ್ದು, ಮಂಬಯಿ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆ ಹೊಂದಿದ್ದಾನೆ.

569ನೇ ರೋಗಿ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ 30 ವರ್ಷದ ಮಹಿಳೆಯಾಗಿದ್ದು, 566, 567 ಮತ್ತು 568ರೊಂದಿಗೆ ಸಂಪರ್ಕ ಹೊಂದಿದ್ದರು. 570, 571, 572 ಹಾಗೂ 573ನೇ ರೋಗಿಗಳು ಮಂಡ್ಯ ಜಿಲ್ಲೆ ಮಳವಳ್ಳಿವರಾಗಿದ್ದು, ಇವರೆಲ್ಲರೂ 179ನೇ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದರು.

574, 575 ಮತ್ತು 576ನೇ ರೋಗಿಗಳು ಬೆಳಗಾವಿ ಜಿಲ್ಲೆ ರಾಯಭಾಗದವರಾಗಿದ್ದು, 301ನೇ ರೋಗಿಯೊಂದಿಗೆ ದ್ವಿತೀಯ ಸಂಪರ್ಕ ಹೊಂದಿದವರಾಗಿದ್ದಾರೆ. ಇವರೆಲ್ಲರಿಗೂ ಜಿಲ್ಲಾ ಕೇಂದ್ರದ ನಿಗಧಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…