ಮುಂಬಯಿ : ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಮೇ. 27ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಒಪ್ಪಿರುವ ಆಯೋಗವು ಕೊರೊನಾ ವಿರುದ್ಧ ಸುರಕ್ಷತೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಿದೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರ ದಿನಾಚರಣೆ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸೌಜನ್ಯದ ಭೇಟಿ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಏ.24 ರಂದು ತೆರವಾಗಿದ್ದ ರಾಜ್ಯದ ವಿಧಾನ ಪರಿಷತ್ ನ 9 ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಗುರುವಾರ ಮನವಿ ಮಾಡಿದ್ದರು. ಆಯೋಗವು ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಠಾಕ್ರೆ ಪಾಳಯದಲ್ಲಿ ಸಂತಸ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಗೊತ್ತಾ..?

ನಿನ್ನೆ ಮಧ್ಯಾಹ್ನದವರೆಗೂ ಕರ್ನಾಟಕ ರಾಜ್ಯವು 12ನೇ ಸ್ಥಾನದಲ್ಲಿತ್ತು, ಆದರೆ, ಪ್ರತಿ ದಿನ ರಾಜ್ಯದಲ್ಲಿ 200ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿರುವುದರಿಂದಾಗಿ ಒಂದು ಸ್ಥಾನ ಮೇಲೆ ಏರಿದೆ.

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ : ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ…

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.