ಮುಂಬಯಿ : ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಮೇ. 27ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಒಪ್ಪಿರುವ ಆಯೋಗವು ಕೊರೊನಾ ವಿರುದ್ಧ ಸುರಕ್ಷತೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಿದೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರ ದಿನಾಚರಣೆ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸೌಜನ್ಯದ ಭೇಟಿ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಏ.24 ರಂದು ತೆರವಾಗಿದ್ದ ರಾಜ್ಯದ ವಿಧಾನ ಪರಿಷತ್ ನ 9 ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಗುರುವಾರ ಮನವಿ ಮಾಡಿದ್ದರು. ಆಯೋಗವು ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಠಾಕ್ರೆ ಪಾಳಯದಲ್ಲಿ ಸಂತಸ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.