ಮುಂಬಯಿ : ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಮೇ. 27ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಒಪ್ಪಿರುವ ಆಯೋಗವು ಕೊರೊನಾ ವಿರುದ್ಧ ಸುರಕ್ಷತೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಿದೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರ ದಿನಾಚರಣೆ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸೌಜನ್ಯದ ಭೇಟಿ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಏ.24 ರಂದು ತೆರವಾಗಿದ್ದ ರಾಜ್ಯದ ವಿಧಾನ ಪರಿಷತ್ ನ 9 ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಗುರುವಾರ ಮನವಿ ಮಾಡಿದ್ದರು. ಆಯೋಗವು ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಠಾಕ್ರೆ ಪಾಳಯದಲ್ಲಿ ಸಂತಸ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ದೇಶದಲ್ಲಿ 73 ಲಕ್ಷದ ಗಡಿ ದಾಟಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 63,371 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ತವರು ಜಿಲ್ಲೆಯ ಆರೋಗ್ಯ ಇಲಾಖೆ ಕಾರ್ಮಿಕನಿಗೆ ನ್ಯಾಯ ವದಗಿಸುವರೆ ಸಚಿವ ಶ್ರೀರಾಮುಲು..?

ಸ್ವತಃ ತಮ್ಮ ತವರು ಜಿಲ್ಲೆಯಲ್ಲಿಯೇ ಕಾರ್ಮಿಕನೊಬ್ಬನಿಗೆ ಅದರಲ್ಲೂ ತಮ್ಮ ಇಲಾಖೆಯಲ್ಲಿಯೇ ಆದ ಅನ್ಯಾಯವನ್ನು ಆರೋಗ್ಯ ಸಚಿವ ಶ್ರೀರಾಮುಲು ಸರಿ ಪಡಿಸುತ್ತಾರಾ?