ಮುಂಬಯಿ : ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ. ಪ್ಲಾಸ್ಮಾ ಥೆರೆಪಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸದ್ಯ ಇಡೀ ದೇಶ ಕೊರೊನಾ ಸೋಂಕಿತರ ಜೀವ ಉಳಿಸಲು ಪ್ಲಾಸ್ಮಾ ಥೆರಪಿ ಮಾಡಲು ಮುಂದಾಗಿತ್ತು. ಅಲ್ಲದೇ, ಬಹುತೇಕ ರಾಷ್ಟ್ರಗಳು ಕೂಡ ಇದರ ಮೊರೆ ಹೋಗುತ್ತಿದ್ದವು. ಆದರೆ, ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊರೊನಾಗೆ ದೇಶದಲ್ಲಿಯೇ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆ ಪಡೆದು ದೆಹಲಿಯ ರೋಗಿಯೊಬ್ಬರು ಗುಣಮುಖರಾದ ನಡುವೆಯೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಪ್ಲಾಸ್ಮಾ ಚಿಕಿತ್ಸೆ ಅಂಗೀಕೃತವಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ನಡೆಸದಿದ್ದರೆ ಸಾವೂ ಸಂಭವಿಸಬಹುದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಎಚ್ಚರಿಕೆ ನೀಡಿತ್ತು. ಸದ್ಯ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಏ. 20ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ 53 ವರ್ಷದ ವ್ಯಕ್ತಿಗೆ ಏ. 25ರಿಂದ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಆರೋಗ್ಯ ಸುಧಾರಿಸಿದಂತೆ ಕಾಣಿಸಿದರೂ ನಂತರ ತೀವ್ರ ಉಸಿರಾಟದ ತೊಂದರೆಯಿಂದಾಗಿ ರೋಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಬ್ಬನ ಕೊಲ್ಲಲು ಇಲ್ಲಿ ಲಾಂಗ್ ಹಿಡಿದು ಬಂದವರು ಎಷ್ಟು ಜನ ಗೊತ್ತಾ?

ಮುಂಬಯಿ : ಒಬ್ಬನನ್ನು ಕೊಲ್ಲಲು ನೂರು ಜನ ಲಾಂಗ್ ಹಿಡಿದುಕೊಂಡು ಬಂದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.