ಮುಂಬಯಿ : ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ. ಪ್ಲಾಸ್ಮಾ ಥೆರೆಪಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸದ್ಯ ಇಡೀ ದೇಶ ಕೊರೊನಾ ಸೋಂಕಿತರ ಜೀವ ಉಳಿಸಲು ಪ್ಲಾಸ್ಮಾ ಥೆರಪಿ ಮಾಡಲು ಮುಂದಾಗಿತ್ತು. ಅಲ್ಲದೇ, ಬಹುತೇಕ ರಾಷ್ಟ್ರಗಳು ಕೂಡ ಇದರ ಮೊರೆ ಹೋಗುತ್ತಿದ್ದವು. ಆದರೆ, ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊರೊನಾಗೆ ದೇಶದಲ್ಲಿಯೇ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆ ಪಡೆದು ದೆಹಲಿಯ ರೋಗಿಯೊಬ್ಬರು ಗುಣಮುಖರಾದ ನಡುವೆಯೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಪ್ಲಾಸ್ಮಾ ಚಿಕಿತ್ಸೆ ಅಂಗೀಕೃತವಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ನಡೆಸದಿದ್ದರೆ ಸಾವೂ ಸಂಭವಿಸಬಹುದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಎಚ್ಚರಿಕೆ ನೀಡಿತ್ತು. ಸದ್ಯ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಏ. 20ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ 53 ವರ್ಷದ ವ್ಯಕ್ತಿಗೆ ಏ. 25ರಿಂದ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಆರೋಗ್ಯ ಸುಧಾರಿಸಿದಂತೆ ಕಾಣಿಸಿದರೂ ನಂತರ ತೀವ್ರ ಉಸಿರಾಟದ ತೊಂದರೆಯಿಂದಾಗಿ ರೋಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 9 ಪಾಸಿಟಿವ್ ಎಲ್ಲೆಲ್ಲಿ..?

ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ…

ತಾನು ಪ್ರೀತಿಸಿದವನೊಂದಿಗೆ ಮದುವೆ ಆಗುತ್ತೇನೆಂದು ಫ್ಲೆಕ್ಸ್ ಏರಿದ ಅಪ್ರಾಪ್ತ ಬಾಲಕಿ!

ಭೋಪಾಲ್ : ತಾಯಿಯ ಇಚ್ಛೆಗೆ ವಿರುದ್ಧವಾಗಿ ನಾನು ಅದೇ ಹುಡುಗನನ್ನು ವಿವಾಹವಾಗುತ್ತೇನೆ ಎಂದು ಅಪ್ರಾಪ್ತೆ ಫ್ಲೆಕ್ಸ್ ಏರಿರುವ ಘಟನೆ ನಡೆದಿದೆ.

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾದಂತಾಗಿದೆ.