ಮುಂಬಯಿ : ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ. ಪ್ಲಾಸ್ಮಾ ಥೆರೆಪಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸದ್ಯ ಇಡೀ ದೇಶ ಕೊರೊನಾ ಸೋಂಕಿತರ ಜೀವ ಉಳಿಸಲು ಪ್ಲಾಸ್ಮಾ ಥೆರಪಿ ಮಾಡಲು ಮುಂದಾಗಿತ್ತು. ಅಲ್ಲದೇ, ಬಹುತೇಕ ರಾಷ್ಟ್ರಗಳು ಕೂಡ ಇದರ ಮೊರೆ ಹೋಗುತ್ತಿದ್ದವು. ಆದರೆ, ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊರೊನಾಗೆ ದೇಶದಲ್ಲಿಯೇ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆ ಪಡೆದು ದೆಹಲಿಯ ರೋಗಿಯೊಬ್ಬರು ಗುಣಮುಖರಾದ ನಡುವೆಯೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಪ್ಲಾಸ್ಮಾ ಚಿಕಿತ್ಸೆ ಅಂಗೀಕೃತವಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ನಡೆಸದಿದ್ದರೆ ಸಾವೂ ಸಂಭವಿಸಬಹುದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಎಚ್ಚರಿಕೆ ನೀಡಿತ್ತು. ಸದ್ಯ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಏ. 20ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ 53 ವರ್ಷದ ವ್ಯಕ್ತಿಗೆ ಏ. 25ರಿಂದ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಆರೋಗ್ಯ ಸುಧಾರಿಸಿದಂತೆ ಕಾಣಿಸಿದರೂ ನಂತರ ತೀವ್ರ ಉಸಿರಾಟದ ತೊಂದರೆಯಿಂದಾಗಿ ರೋಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಭಯ!: ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆಯಾ ಜಿಮ್ಸ್..!

ಗದಗ: ನಿನ್ನೆ ರಾತ್ರಿಯಿಂದಲೇ ಕೊರೊನಾ ಪಾಸಿಟಿವ್ ಎಂದು 30 ಸೊಂಕಿತರ ಲೀಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ…

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

ಕೊರೊನಾ ವಿರುದ್ಧ ಔಷಧಿ ಕಂಡು ಹಿಡಿಯುವ ಹಾದಿಯಲ್ಲಿ ಇಸ್ರೇಲ್?

ಕೊರೊನಾ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.