ಹೈದರಾಬಾದ್ : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ಲಾಕ್ ಡೌನ್ ನಲ್ಲಿ ಸಿಲುಕಿದ್ದವರ ಸಂಚಾರಕ್ಕೆ ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಹೀಗಾಗಿ ತೆಲಂಗಾಣದಿಂದ ಜಾರ್ಖಂಡ್ಗೆ ವಲಸಿಗರನ್ನು ಹೊತ್ತು ರೈಲು ಶುಕ್ರವಾರ ಪ್ರಯಾಣ ಬೆಳೆಸಿದೆ.

ಲಿಂಗಂಪಲ್ಲಿಯಿಂದ ಜಾರ್ಖಂಡ್ನ ಹತಿಯಾಗೆ ರೈಲು ಹೊರಟಿದೆ. ಬೆಳಗ್ಗೆ 4:50ಕ್ಕೆ ರೈಲು ಪ್ರಯಾಣ ಆರಂಭಿಸಿದೆ. ಈ ರೈಲು 24 ಬೋಗಿಗಳನ್ನು ಹೊಂದಿದ್ದು, ಇದೂವರೆಗೆ ವಲಸಿಗರನ್ನು ಕರೆದೊಯ್ಯಲು ನಿಯೋಜಿಸಿದ ಏಕೈಕ ರೈಲು ಇದಾಗಿದೆ ಎಂದು ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕರು ತಿಳಿಸಿದ್ದಾರೆ.

1 comment
  1. ಕಾರ್ಮಿಕರಿಗೆ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸರಿಯಾದ ವೇತನ ನಿಗದಿ ಮಾಡಿದರೆ ಅವರ ಜೀವನ ಮಟ್ಟ ತಾನಾಗಿಯೇ ಸುಧಾರಿಸುತ್ತದೆ…

Leave a Reply

Your email address will not be published. Required fields are marked *

You May Also Like

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಹತ್ರಾಸ್ ಪ್ರಕರಣ – ಕುಟುಂಬಸ್ಥರಿಂದಲೇ ಯುವತಿಯ ಕೊಲೆಯಾಗಿದೆ ಎಂದ ಆರೋಪಿ!

ಲಕ್ನೋ : ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಎಸ್ಪಿಪಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ಸೆ. 7ರಂದು ಜೈಲಿನಿಂದಲೇ ಹತ್ರಾಸ್ ಎಸ್ ಪಿಗೆ ಪತ್ರ ಬರೆದಿದ್ದಾನೆ.