ಹೈದರಾಬಾದ್ : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ಲಾಕ್ ಡೌನ್ ನಲ್ಲಿ ಸಿಲುಕಿದ್ದವರ ಸಂಚಾರಕ್ಕೆ ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಹೀಗಾಗಿ ತೆಲಂಗಾಣದಿಂದ ಜಾರ್ಖಂಡ್ಗೆ ವಲಸಿಗರನ್ನು ಹೊತ್ತು ರೈಲು ಶುಕ್ರವಾರ ಪ್ರಯಾಣ ಬೆಳೆಸಿದೆ.

ಲಿಂಗಂಪಲ್ಲಿಯಿಂದ ಜಾರ್ಖಂಡ್ನ ಹತಿಯಾಗೆ ರೈಲು ಹೊರಟಿದೆ. ಬೆಳಗ್ಗೆ 4:50ಕ್ಕೆ ರೈಲು ಪ್ರಯಾಣ ಆರಂಭಿಸಿದೆ. ಈ ರೈಲು 24 ಬೋಗಿಗಳನ್ನು ಹೊಂದಿದ್ದು, ಇದೂವರೆಗೆ ವಲಸಿಗರನ್ನು ಕರೆದೊಯ್ಯಲು ನಿಯೋಜಿಸಿದ ಏಕೈಕ ರೈಲು ಇದಾಗಿದೆ ಎಂದು ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕರು ತಿಳಿಸಿದ್ದಾರೆ.

1 comment
  1. ಕಾರ್ಮಿಕರಿಗೆ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸರಿಯಾದ ವೇತನ ನಿಗದಿ ಮಾಡಿದರೆ ಅವರ ಜೀವನ ಮಟ್ಟ ತಾನಾಗಿಯೇ ಸುಧಾರಿಸುತ್ತದೆ…

Leave a Reply

Your email address will not be published. Required fields are marked *

You May Also Like

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು…

ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?

ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 25317…

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.