ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ತಕ್ಷಣ ಪುನರಾರಂಭಿಸಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಇಂದು ತಮ್ಮ ಕಚೇರಿಯಿಂದಲೇ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಎಲ್ಲ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರೆಡ್ ಜೋನ್ ಗಳನ್ನು ಹೊರತುಪಡಿಸಿ ಕೂಡಲೇ ಕೈಗಾರಿಕೆಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಕಳುಹಿಸುವ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಲಬುರಗಿಗೂ ಲಾಕ್ ಡೌನ್ ಸಡಲಿಕೆಗೂ ಸಂಬಂಧವಿಲ್ಲ!!

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

ರೈತ ಸಂಘ, ಹಸಿರು ಸೇನೆ: ಮಹಿಳಾ ಘಟಕ ಉದ್ಘಾಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ…

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…