ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ.
ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆ ಹೇಳಿದೆ. ಆದರೆ, ಸಮೀಕ್ಷೆಯಲ್ಲಿ ದೇಶ ಸರಿಯಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ಇಪ್ಸೊಸ್ ನಡೆಸಿದ ವಾಟ್ ವರೀಸ್ ದ ವರ್ಲ್ಡ್ ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಜನರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆತಂಕಕ್ಕೆ ಏನು ಕಾರಣಗಳು ಎಂದು ಕೇಳಿದಾಗ ಶೇ. 62ರಷ್ಟು ಜನ ಕೊರೊನಾ ಎಂದು ಹೇಳಿದ್ದಾರೆ. ಶೇಕಡಾ 38ರಷ್ಟು ಜನ ನಿರುದ್ಯೋಗ ಸಮಸ್ಯೆ, ಶೇ. 24ರಷ್ಟು ಜನ ಅಪರಾಧ ಮತ್ತು ಹಿಂಸಾಚಾರ ಮತ್ತು ಶೇ. 21ರಷ್ಟು ಜನ ಬಡತನ ಮತ್ತು ಸಾಮಾಜಿಕ ಅಸಮಾನತೆ ಎಂದಿದ್ದಾರೆ.
ಭಾರತದಲ್ಲಿ ಶೇ. 65ರಷ್ಟು ಜನ ದೇಶ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಗ್ರೇಟ್ ಬ್ರಿಟನ್, ಜರ್ಮನಿ, ಭಾರತ, ಇಸ್ರೇಲ್, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಸ್ಪೈನ್, ಸ್ವೀಡನ್, ಟರ್ಕಿ ಮತ್ತು ಅಮೆರಿಕ ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
Leave a Reply

Your email address will not be published. Required fields are marked *

You May Also Like

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ