ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ.
ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆ ಹೇಳಿದೆ. ಆದರೆ, ಸಮೀಕ್ಷೆಯಲ್ಲಿ ದೇಶ ಸರಿಯಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ಇಪ್ಸೊಸ್ ನಡೆಸಿದ ವಾಟ್ ವರೀಸ್ ದ ವರ್ಲ್ಡ್ ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಜನರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆತಂಕಕ್ಕೆ ಏನು ಕಾರಣಗಳು ಎಂದು ಕೇಳಿದಾಗ ಶೇ. 62ರಷ್ಟು ಜನ ಕೊರೊನಾ ಎಂದು ಹೇಳಿದ್ದಾರೆ. ಶೇಕಡಾ 38ರಷ್ಟು ಜನ ನಿರುದ್ಯೋಗ ಸಮಸ್ಯೆ, ಶೇ. 24ರಷ್ಟು ಜನ ಅಪರಾಧ ಮತ್ತು ಹಿಂಸಾಚಾರ ಮತ್ತು ಶೇ. 21ರಷ್ಟು ಜನ ಬಡತನ ಮತ್ತು ಸಾಮಾಜಿಕ ಅಸಮಾನತೆ ಎಂದಿದ್ದಾರೆ.
ಭಾರತದಲ್ಲಿ ಶೇ. 65ರಷ್ಟು ಜನ ದೇಶ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಗ್ರೇಟ್ ಬ್ರಿಟನ್, ಜರ್ಮನಿ, ಭಾರತ, ಇಸ್ರೇಲ್, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಸ್ಪೈನ್, ಸ್ವೀಡನ್, ಟರ್ಕಿ ಮತ್ತು ಅಮೆರಿಕ ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
Leave a Reply

Your email address will not be published. Required fields are marked *

You May Also Like

ಸಾರಿಗೆ ಸಿಬ್ಬಂದಿಗಳಿಗೆ ಸಂಬಳವೇ ಇಲ್ಲ! ಇನ್ನು ದೀಪಾವಳಿ ಆಚರಣೆ ಹೇಗೆ?

ನಾಡಿನಲ್ಲಿ ಪ್ರಮುಖವಾಗಿ ಆಚರಿಸುವ ದೊಡ್ಡ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಆದರೆ ಬೆಳಕಿನ ಹಬ್ಬ ಸಾರಿಗೆ ಸಿಬ್ಬಂದಿಗಳಿಗೆ ಮಾತ್ರ ಕತ್ತಲಲ್ಲಿಟ್ಟಂತಾಗಿದೆ.

2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಗುಲಾಬಿ ಬಣ್ಣದ ಚೂಡಿದಾರ ಧರಿಸಿದ ಯುವತಿ

ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.