ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ಕೊರೊನಾ ನಿಯಂತ್ರಣಕ್ಕೆ ಆಯುರ್ವೇದದಲ್ಲಿರುವ ಪರಿಹಾರ, ಚಳಿಗಾಲದಲ್ಲಿ ಕೊರೊನಾ ಮುಂಜಾಗೃತೆ ಹೇಗಿರಬೇಕು?

ಕೊರೊನಾ ನಿಯಂತ್ರಣಕ್ಕೆ ಆಯುರ್ವೇದದಲ್ಲಿರುವ ಪರಿಹಾರ, ಚಳಿಗಾಲದಲ್ಲಿ ಕೊರೊನಾ ಮುಂಜಾಗೃತೆ ಹೇಗಿರಬೇಕು? ಡಾ.ಮಹೇಶ್ ಬುಜರಿ ಅವರ ಜೊತೆಗೆ ಡಾ. ಬಸವರಾಜ್ ಡಿ. ತಳವಾರ ಅವರು ಉತ್ತರಪ್ರಭಕ್ಕೆ ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ..

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.