ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ಉಗ್ರರಿಂದ ಬಿಜೆಪಿ ನಾಯಕ ವಾಸೀಂ ಹತ್ಯೆ: ತಂದೆ, ಸಹೋದರನೂ ಬಲಿ

ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ…

ಜಕ್ಕಲಿಯಲ್ಲಿ ಹೀಗೊಂದು ವಿಶಿಷ್ಟ ಹೋಳಿ ಹುಣ್ಣಿಮೆ ಆಚರಣೆ

ವಸಂತ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣುಮೆ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮ ಹಿಂದೂ ಧರ್ಮದ ಪ್ರಕಾರ ಹೋಳಿ ಒಂದು ಮಹತ್ವಪೂರ್ಣ ಮಹಾಪರ್ವ ಎಂದು ಭಾವಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮಾ.29 ಸೋಮವಾರ ಹೋಳಿ ಹಬ್ಬವನ್ನು ಹಾಗೂ ಕಾಮ ದಹನವನ್ನು ಮಾ.28 ಆಚರಿಸಲಾಗುತ್ತದೆ.

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ.