ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ ರೈಲು, ವಿಮಾನ ಸೇವೆ ರದ್ದುಗೊಳಿಸಲಾಗಿದೆ. ಲಾಕ್ ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು, ಪ್ರವಾಸಿಗರಿಗಾಗಿ ಶ್ರಮಿಕ ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ. ಮೇ 17ರ ವರೆಗೆ ಸಬ್ ಅರ್ಬನ್ ರೈಲು ಸೇರಿದಂತೆ ಎಲ್ಲ ರೀತಿಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಗಾಗಿ ಯಾರೂ ರೈಲ್ವೆ ನಿಲ್ದಾಣಗಳಿಗೆ ಬರಬೇಡಿ ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಇನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಹ ಮೇ. 17ರ ಮಧ್ಯ ರಾತ್ರಿಯವರೆಗೆ ಎಲ್ಲಾ ವಾಣಿಜ್ಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.