ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾಂದ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಕಂಟೇನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ.
ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಿದ್ದಾರೆ.
Leave a Reply

Your email address will not be published. Required fields are marked *

You May Also Like

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ವೆಂಟಿಲೇಟರ್ ಸಮಸ್ಯೆಗೆ ಶಾಸಕ ಎಚ್.ಕೆ.ಪಾಟೀಲ್ ಸ್ಪಂದನೆ, ಕೊಲ್ಹಾಪುರದಿಂದ ಗದಗ ಜಿಲ್ಲೆಗೆ 25 ವೆಂಟಿಲೇಟರ್

ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.