ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾಂದ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಕಂಟೇನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ.
ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಿದ್ದಾರೆ.
Leave a Reply

Your email address will not be published. Required fields are marked *

You May Also Like

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ಪಂಜಾಬ್ ನಲ್ಲಿ ಲಾಕ್ ಡೌನ್ ಮುಂದುವರಿಕೆ!!

ಅಮೃತಸರ : ಪಂಜಾಬ್ ರಾಜ್ಯದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಮೇ. 31 ರ ವರೆಗೆ…

ಗದಗ ಜಿಲ್ಲೆಯಲ್ಲಿಂದು 6 ಕಂಟೇನ್ ಮೆಂಟ್ ಪ್ರದೇಶ ನಿರ್ಭಂಧ ತೆರವು

ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ…