ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ 2,294 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಅಲ್ಲದೇ, ಇಲ್ಲಿಯವರೆಗೆ 1,223 ಜನ ಸೋಂಕಿಗೆ ಬಲಿಯಾಗಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೊರೊನಾ ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೂರನೇ ಬಾರಿಯೂ ಲಾಕ್ ಡೌನ್ ನ್ನು ವಿಸ್ತರಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮೇ. 17ರ ವರೆಗೂ ಲಾಕ್ ಡೌನ್ ಮುಂದುವರೆದಿದೆ. ಆದರೂ ಮಹಾಮಾರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇಲ್ಲಿಯವರೆಗೂ 10,018 ಜನ ಸೋಂಕಿನಿಂದ ಗುಣ ಹೊಂದಿದ್ದಾರೆ. ಆದರೆ, ಕೊರೊನಾ ವಿರುದ್ದದ ಹೊರಾಟದ ಜೊತೆಗೇ ಆರ್ಥಿಕ ಚಟುವಟಿಕೆಗಳನ್ನೂ ಹಂತಹಂತವಾಗಿ ಆರಂಭಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಹೆಚ್ಚಿನ ವಿನಾಯಿತಿಗಳನ್ನು ಪ್ರಕಟಿಸಿದೆ.




		
Leave a Reply

Your email address will not be published. Required fields are marked *

You May Also Like

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ – ನಟಿಮಣಿಯರ ರಕ್ಷಣೆ!

ಮುಂಬಯಿ : ಹೈ ಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಓರ್ವ ಸಿನಿಮಾ ನಟಿ ಸೇರಿದಂತೆ ಮೂವರು ಧಾರವಾಹಿ ನಟಿಯರನ್ನು ರಕ್ಷಿಸಲಾಗಿದೆ.