ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ.
ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆ ಹೇಳಿದೆ. ಆದರೆ, ಸಮೀಕ್ಷೆಯಲ್ಲಿ ದೇಶ ಸರಿಯಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ಇಪ್ಸೊಸ್ ನಡೆಸಿದ ವಾಟ್ ವರೀಸ್ ದ ವರ್ಲ್ಡ್ ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಜನರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆತಂಕಕ್ಕೆ ಏನು ಕಾರಣಗಳು ಎಂದು ಕೇಳಿದಾಗ ಶೇ. 62ರಷ್ಟು ಜನ ಕೊರೊನಾ ಎಂದು ಹೇಳಿದ್ದಾರೆ. ಶೇಕಡಾ 38ರಷ್ಟು ಜನ ನಿರುದ್ಯೋಗ ಸಮಸ್ಯೆ, ಶೇ. 24ರಷ್ಟು ಜನ ಅಪರಾಧ ಮತ್ತು ಹಿಂಸಾಚಾರ ಮತ್ತು ಶೇ. 21ರಷ್ಟು ಜನ ಬಡತನ ಮತ್ತು ಸಾಮಾಜಿಕ ಅಸಮಾನತೆ ಎಂದಿದ್ದಾರೆ.
ಭಾರತದಲ್ಲಿ ಶೇ. 65ರಷ್ಟು ಜನ ದೇಶ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಗ್ರೇಟ್ ಬ್ರಿಟನ್, ಜರ್ಮನಿ, ಭಾರತ, ಇಸ್ರೇಲ್, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಸ್ಪೈನ್, ಸ್ವೀಡನ್, ಟರ್ಕಿ ಮತ್ತು ಅಮೆರಿಕ ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
Leave a Reply

Your email address will not be published. Required fields are marked *

You May Also Like

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.