ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?
ಬೆಂಗಳೂರು : ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಯೊಬ್ಬರಿಗೆ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ನೀಡಿದೆ.
ತಬ್ಲಿಘಿಗಳ ಪರ ಮಾತನಾಡಿದ ಅಧಿಕಾರಿಯೊಬ್ಬರು ಪೇಚಿಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ನೀಡಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ ಸಿನ್ ಅವರು ಸದ್ಯ ನೊಟೀಸ್ ಪಡೆದ ಅಧಿಕಾರಿ. ಅವರು ಇತ್ತೀಚೆಗೆ ದೆಹಲಿಯ 300ಕ್ಕೂ ಹೆಚ್ಚು ತಬ್ಲಿಘಿ ಹಿರೋಗಳು ದೇಶದ ಏಳಿಗೆಗಾಗಿ ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಆದರೆ ಗೋದಿ ಮೀಡಿಯಾ ಇಂತಹ ಹಿರೋಗಳು ಮಾಡಿದ ಮಾನವೀಯ ಕೆಲಸವನ್ನು ಯಾವತ್ತು ತೋರಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ರಾಜ್ಯ ಸರ್ಕಾರ, ಸ್ಪಷ್ಟನೆ ನೀಡುವಂತೆ ನೊಟೀಸ್ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅಲ್ಲದೇ, ಐದು ದಿನಗಳ ಒಳಗಾಗಿ ಪತ್ರದ ಮೂಲಕ ಸ್ಪಷ್ಟನೆ ನೀಡುವಂತೆ ತಿಳಿಸಿದೆ.