ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ಬೆಂಗಳೂರು : ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಯೊಬ್ಬರಿಗೆ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ನೀಡಿದೆ.

ತಬ್ಲಿಘಿಗಳ ಪರ ಮಾತನಾಡಿದ ಅಧಿಕಾರಿಯೊಬ್ಬರು ಪೇಚಿಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ನೀಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೊಹ್‌ ಸಿನ್‌ ಅವರು ಸದ್ಯ ನೊಟೀಸ್ ಪಡೆದ ಅಧಿಕಾರಿ. ಅವರು ಇತ್ತೀಚೆಗೆ ದೆಹಲಿಯ 300ಕ್ಕೂ ಹೆಚ್ಚು ತಬ್ಲಿಘಿ ಹಿರೋಗಳು ದೇಶದ ಏಳಿಗೆಗಾಗಿ ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಆದರೆ ಗೋದಿ ಮೀಡಿಯಾ ಇಂತಹ ಹಿರೋಗಳು ಮಾಡಿದ ಮಾನವೀಯ ಕೆಲಸವನ್ನು ಯಾವತ್ತು ತೋರಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ರಾಜ್ಯ ಸರ್ಕಾರ, ಸ್ಪಷ್ಟನೆ ನೀಡುವಂತೆ ನೊಟೀಸ್‌ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅಲ್ಲದೇ, ಐದು ದಿನಗಳ ಒಳಗಾಗಿ ಪತ್ರದ ಮೂಲಕ ಸ್ಪಷ್ಟನೆ ನೀಡುವಂತೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…

ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ!

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ…

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ಹುಲಕೋಟಿ ಬಳಿ ಕಾರು-ಲಾರಿ ಡಿಕ್ಕಿ

ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಮೀಪದ ಹುಲಕೋಟಿ ಹೊರವಲಯದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.