ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.