ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾಂದ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಕಂಟೇನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ.
ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಿದ್ದಾರೆ.
Leave a Reply

Your email address will not be published. Required fields are marked *

You May Also Like

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಆಹಾರದ ಅವಶ್ಯಕತೆ

ಪ್ರತಿ ಜೀವಿಯ ಜೀವನಾಧಾರವೇ ಅದರ ಹೊಟ್ಟೆಯ ಹಸಿವು, ಆಹಾರ ಇಲ್ಲದೇ ಹೋದರೆ ಪ್ರಾಣ ಪಕ್ಷಿಯೇ ಹಾರಿಹೋಗುವುದಂತು ಗ್ಯಾರಂಟಿ ಎನ್ನುವದಂತು ದಿಟ್ಟ ಎನ್ನುವ ವಿಚಾರಗಳನ್ನು ತಮ್ಮ ಮುಂದೆ ಹಂಚಿಕೊಳ್ಳುತ್ತ, ಇಂದಿನ ದಿನಮಾನಗಳಲ್ಲಿ ಮನುಷ್ಯರಿಗೆ ಆಹಾರ ಅವಶ್ಯಕತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1945 ರಲ್ಲಿ ವಿಶ್ವಸಂಸ್ಥೆಯ ಕೃಷಿ ವಿಭಾಗದ ಸ್ಥಾಪನೆಯ ಸವಿ ನೆನಪಿಗಾಗಿ ಅ.16 ರ ಈ ದಿನವನ್ನು ಹಸಿವಿನ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಯಿತು. 1981 ರ ನಂತರ ಈ ದಿನವನ್ನು ವ್ಯಾಪಕವಾಗಿ ವಿಶ್ವ ಆಹಾರ ದಿನವನ್ನಾಗಿ ವಿಶ್ವಾದ್ಯಾಂತ ಆಚರಣೆ ಮಾಡುವ ಮೂಲಕ ಜಾರಿಗೆ ತರಲಾಯಿತು. ಅಂದರೆ ಅ.16 ರಂದು ವಿಶ್ವಾದ್ಯಾಂತ ವಿಶ್ವ ಆಹಾರ ದಿನವನ್ನಾಗಿ ನಾವೆಲ್ಲರೂ ಸೇರಿ ಆಚರಣೆ ಮಾಡುತ್ತಿದ್ದೇವೆ. ಆದಕಾರಣ ಈ ದಿನದ ನಿಮಿತ್ತ ಭಕ್ಷ್ಯ ಭೋಜನವನ್ನು ಸವಿದು, ಆಹಾರ ಸಂಸ್ಕೃತಿಯನ್ನು ಸಂಭ್ರಮದಿಂದ ನೆನಪಿಸಿ, ತಿಂದು ತೇಗಲು ಈ ದಿನವನ್ನು ಆಚರಿಸಲು ಕರೆ ಕೊಡಲಾಗಿದೆ ಎಂದು ಭಾವಿಸಿದ್ದರೆ. ಅದು ನೂರಕ್ಕೆ ನೂರರಷ್ಟು ತಪ್ಪು. ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಕುರಿತು ಜಾಗೃತಿ, ಅಭಿಯಾನ ಜೊತೆಗೆ ಹಸಿವಿನಿಂದ ಸಾಯುವವರ ನೋವಿನ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ, ತಲುಪಿಸುವ ಏಕೈಕ ಉದ್ದೇಶದ ಜೊತೆಗೆ ಆಹಾರ ಸಮಸ್ಯೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತು ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಜನತೆಗೆ ಜನಜಾಗೃತಿ ಅಭಿಯಾನ, ಗೋಷ್ಠಿ, ವಿಚಾರ ಸಂಕೀರ್ಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ತಿಳಿ ಹೇಳಲು ಆಹಾರ ದಿನವನ್ನು ಆಚರಣೆ ಮಾಡಲಾಗುತ್ತಿದೆ.