ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ 2,294 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಅಲ್ಲದೇ, ಇಲ್ಲಿಯವರೆಗೆ 1,223 ಜನ ಸೋಂಕಿಗೆ ಬಲಿಯಾಗಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೊರೊನಾ ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೂರನೇ ಬಾರಿಯೂ ಲಾಕ್ ಡೌನ್ ನ್ನು ವಿಸ್ತರಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮೇ. 17ರ ವರೆಗೂ ಲಾಕ್ ಡೌನ್ ಮುಂದುವರೆದಿದೆ. ಆದರೂ ಮಹಾಮಾರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇಲ್ಲಿಯವರೆಗೂ 10,018 ಜನ ಸೋಂಕಿನಿಂದ ಗುಣ ಹೊಂದಿದ್ದಾರೆ. ಆದರೆ, ಕೊರೊನಾ ವಿರುದ್ದದ ಹೊರಾಟದ ಜೊತೆಗೇ ಆರ್ಥಿಕ ಚಟುವಟಿಕೆಗಳನ್ನೂ ಹಂತಹಂತವಾಗಿ ಆರಂಭಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಹೆಚ್ಚಿನ ವಿನಾಯಿತಿಗಳನ್ನು ಪ್ರಕಟಿಸಿದೆ.




		
Leave a Reply

Your email address will not be published. Required fields are marked *

You May Also Like

ಸಂಗೀತ ಲೋಕದ ಧ್ರವತಾರೆ ಇನ್ನೂ ಮುಂದೆ ನೆನಪು ಮಾತ್ರ!

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಇನ್ನು ಸಂಗೀತ ಲೋಕದ ನೆನಪು ಮಾತ್ರ!

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.